Sunday, September 13, 2026
Sunday, September 13, 2026

ನಮ್ಮ ಪಕ್ಷ ಚುನಾವಣೆಗೆ ತಯಾರಿದೆ- ಶಿವಕುಮಾರ್

Date:

ವಿಧಾನಸಭೆ ಚುನಾವಣೆಯು ಯಾವಾಗ ನಡೆದರೂ ಎದುರಿಸಲು ನಾವು ಸಿದ್ಧವಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಮಾಧ್ಯಮಮಿತ್ರರೊಂದಿಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದರು.

ಅವಧಿಗೂ ಮುನ್ನವೇ ಚುನಾವಣೆ ಸಾಧ್ಯತೆ ಇದೆ ಎಂಬ ವಂದಂತಿ ಇದೆ. ಬಿಜೆಪಿಯವರು ಸಿದ್ಧತಾ ಕಾರ್ಯಾಗಾರ ನಡೆಸಿದ್ದಾರೆ.

ಅವರಿಗೆ ಸೋಲುವ ಭಯವಿದೆ. ಸರ್ಕಾರದ ವಿರುದ್ಧ ಜನರಿಗೆ ಆಕ್ರೋಶವಿದೆ. ಈ ಆಕ್ರೋಶ ಹೆಚ್ಚಾಗುವ ಮುನ್ನ ಚುನಾವಣೆಗೆ ಹೋಗುವ ಯೋಜನೆಯಲ್ಲಿ ಬಿಜೆಪಿಯವರಿದ್ದಂತಿದೆ. ನಾವೂ ತಯಾರಿದ್ದೇವೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು, ಸಾಮಾನ್ಯ ಜನರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವರ ನೋವನ್ನು ಗಮನಿಸಿ, ಶಾಂತಿಯ ತೋಟಕ್ಕೆ ಧಕ್ಕೆಯಾಗದಂತೆ ಸರ್ಕಾರ ಕೆಲಸ ಮಾಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಸಂದರ್ಭ ನೀಡಿದ್ದ ಭರವಸೆಗಳನ್ನು ಬಿಜೆಪಿಯವರು ಈಡೇರಿಸಿಲ್ಲ. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಭರವಸೆಗಳನ್ನೆಲ್ಲಾ ಈಡೇರಿಸಿದ್ದೇವೆ. ಇದು ಬಿಜೆಪಿಯ ಅಸೂಯೆಗೆ ಕಾರಣವಾಗಿದೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅವರ ಅಸೂಯೆಗೆ ಮದ್ದು ಕೊಡುತ್ತೇವೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ಜಲದರ್ಶಿನಿ ಅತಿಥಿ ಗೃಹದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳೊಂದಿಗೆ ಶಿವಕುಮಾರ್ ಚರ್ಚಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಚಾಮರಾಜನಗರ ಜಿಲ್ಲಾ ಘಟಕದ ಅಧ್ಯಕ್ಷ ಮರಿಸ್ವಾಮಿ, ಮುಖಂಡರಾದ ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಡಿ.ರವಿಶಂಕರ್, ಹರೀಶ್ ಗೌಡ, ಕೆ.ಮರಿಗೌಡ, ಆಯೂಬ್ ಖಾನ್‌, ಕೂರ್ಗಳ್ಳಿ ಮಾದೇವ್, ಸೂರಜ್‌ ಹೆಗಡೆ, ಲಕ್ಷ್ಮಣ್, ಶ್ರೀನಾಥ್ ಬಾಬು, ಸುನಂದ ಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...