Sunday, March 16, 2025
Sunday, March 16, 2025

ಕೃಷಿ ವಲಯಕ್ಕೆ ಪೂರಕವಾಗಿ ₹ 23 ಸಾವಿರ ಕೋಟಿ ಮೌಲ್ಯದ ಯೋಜನೆ ಪ್ರಸ್ತಾವನೆ ಸ್ವೀಕೃತ

Date:

ಕೃಷಿ ವಲಯಕ್ಕೆ ಪೂರಕವಾದ ವಿನೂತನ ಯೋಜನೆಗಳಿಗೆ ಹಣಕಾಸು ಸೌಲಭ್ಯ ಒದಗಿಸುವ ಕೇಂದ್ರದ ಕೃಷಿ ಮೂಲಸೌಕರ್ಯ ನಿಧಿ’ ಅಡಿ ಕಳೆದ ಮೂರು ವರ್ಷಗಳಲ್ಲಿ ದೇಶಾದ್ಯಂತ ಒಟ್ಟಾರೆ 23 ಸಾವಿರ ಕೋಟಿ ಮೊತ್ತದ ವಿವಿಧ ಪ್ರಕಾರದ ಪ್ರಸ್ತಾವನೆಗಳು ಸ್ವೀಕರಿಸಲಾಗಿದ್ದು, ಈ ಪೈಕಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಪರಿಗಣನೆ ಹಂತದಲ್ಲಿವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ತಿಳಿಸಿದರು.

ಶೈತ್ಯಾಗಾರ, ಗೋದಾಮುಗಳು ಸೇರಿದಂತೆ ಕೊಯ್ಲೋತ್ತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2020ರಲ್ಲಿ ಈ ಕೃಷಿ ಮೂಲಸೌಕರ್ಯ ನಿಧಿ ಸ್ಥಾಪಿಸಿದೆ.

ಇದರಡಿ ಬ್ಯಾಂಕ್‌ಗಳ ಮೂಲಕ ಒಂದು ಲಕ್ಷ ಕೋಟಿ ರೂ.ವರೆಗೂ ಹಣಕಾಸು ನೆರವು ನೀಡಲು ಅವಕಾಶ ಇದೆ. ಇದರಲ್ಲಿ ಈವರೆಗೆ 23 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಇದರಲ್ಲಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಅನುಮೋದನೆಯ ಹಲವು ಹಂತಗಳಲ್ಲಿದ್ದು, ಈ ಪೈಕಿ ಒಂಬತ್ತು ಸಾವಿರ ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಬ್ಯಾಂಕ್‌ಗಳ ಮೂಲಕ ಹಣ ಬಿಡುಗಡೆ ಆಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದವರಾರೂ ದೊಡ್ಡ ಕಂಪೆನಿಗಳ ಮಾಲಿಕರಲ್ಲ. ರೈತರು, ರೈತ ಉತ್ಪಾದಕ ಸಂಘಗಳಾಗಿವೆ. ವಿನೂತನ ಯೋಜನೆಗಳಿಗೆ ಈ ನಿಧಿ ಅಡಿ ವೇದಿಕೆ ಕಲ್ಪಿಸಲಾಗುತ್ತದೆ. ಬ್ಯಾಂಕ್‌ಗಳ ಮೂಲಕ ಕನಿಷ್ಠ ಬಡ್ಡಿದರ (ಶೇ. 3)ದಲ್ಲಿ ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಯೋಜನೆ ಅವಧಿ 2025-26ರವರೆಗೆ ಇರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...