Sunday, December 14, 2025
Sunday, December 14, 2025

ಕೃಷಿ ವಲಯಕ್ಕೆ ಪೂರಕವಾಗಿ ₹ 23 ಸಾವಿರ ಕೋಟಿ ಮೌಲ್ಯದ ಯೋಜನೆ ಪ್ರಸ್ತಾವನೆ ಸ್ವೀಕೃತ

Date:

ಕೃಷಿ ವಲಯಕ್ಕೆ ಪೂರಕವಾದ ವಿನೂತನ ಯೋಜನೆಗಳಿಗೆ ಹಣಕಾಸು ಸೌಲಭ್ಯ ಒದಗಿಸುವ ಕೇಂದ್ರದ ಕೃಷಿ ಮೂಲಸೌಕರ್ಯ ನಿಧಿ’ ಅಡಿ ಕಳೆದ ಮೂರು ವರ್ಷಗಳಲ್ಲಿ ದೇಶಾದ್ಯಂತ ಒಟ್ಟಾರೆ 23 ಸಾವಿರ ಕೋಟಿ ಮೊತ್ತದ ವಿವಿಧ ಪ್ರಕಾರದ ಪ್ರಸ್ತಾವನೆಗಳು ಸ್ವೀಕರಿಸಲಾಗಿದ್ದು, ಈ ಪೈಕಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಪರಿಗಣನೆ ಹಂತದಲ್ಲಿವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ತಿಳಿಸಿದರು.

ಶೈತ್ಯಾಗಾರ, ಗೋದಾಮುಗಳು ಸೇರಿದಂತೆ ಕೊಯ್ಲೋತ್ತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2020ರಲ್ಲಿ ಈ ಕೃಷಿ ಮೂಲಸೌಕರ್ಯ ನಿಧಿ ಸ್ಥಾಪಿಸಿದೆ.

ಇದರಡಿ ಬ್ಯಾಂಕ್‌ಗಳ ಮೂಲಕ ಒಂದು ಲಕ್ಷ ಕೋಟಿ ರೂ.ವರೆಗೂ ಹಣಕಾಸು ನೆರವು ನೀಡಲು ಅವಕಾಶ ಇದೆ. ಇದರಲ್ಲಿ ಈವರೆಗೆ 23 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಇದರಲ್ಲಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಅನುಮೋದನೆಯ ಹಲವು ಹಂತಗಳಲ್ಲಿದ್ದು, ಈ ಪೈಕಿ ಒಂಬತ್ತು ಸಾವಿರ ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಬ್ಯಾಂಕ್‌ಗಳ ಮೂಲಕ ಹಣ ಬಿಡುಗಡೆ ಆಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದವರಾರೂ ದೊಡ್ಡ ಕಂಪೆನಿಗಳ ಮಾಲಿಕರಲ್ಲ. ರೈತರು, ರೈತ ಉತ್ಪಾದಕ ಸಂಘಗಳಾಗಿವೆ. ವಿನೂತನ ಯೋಜನೆಗಳಿಗೆ ಈ ನಿಧಿ ಅಡಿ ವೇದಿಕೆ ಕಲ್ಪಿಸಲಾಗುತ್ತದೆ. ಬ್ಯಾಂಕ್‌ಗಳ ಮೂಲಕ ಕನಿಷ್ಠ ಬಡ್ಡಿದರ (ಶೇ. 3)ದಲ್ಲಿ ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಯೋಜನೆ ಅವಧಿ 2025-26ರವರೆಗೆ ಇರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...