Sunday, December 7, 2025
Sunday, December 7, 2025

ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಬಾಕಿಯಿರುವ ಸಾಲಮನ್ನಾ ಬಗ್ಗೆ ಚಿಂತನೆ- ಸಿಎಂ

Date:

ವಿಶ್ವಕರ್ಮ ಸಮುದಾಯದ ಕುಲಶಾಸ್ತ್ರ ಅಧ್ಯಯನ ನಡೆಸಲು ಸರಕಾರ ಮುಂದಾಗಿದ್ದು, ಶೀಘ್ರ ಆದೇಶ ಹೊರಡಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಶ್ವಕರ್ಮ ಬಂಧುಗಳ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನದ (ಕುಲಶಾಸ್ತ್ರ ಅಧ್ಯಯನ) ಅಗತ್ಯ ಇದೆ. ಇದು ಆ ಸಮುದಾಯದ ಬೇಡಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗುವುದು. ಈ ಕ್ರಮ
ದಿಂದ ಸಮುದಾಯಕ್ಕೆ ಮುಂಬರುವ ದಿನಗಳಲ್ಲಿ ಸಾಕಷ್ಟು ಅನುಕೂಲ ಆಗಲಿದೆ ಎಂದು ಅವರು ತಿಳಿಸಿದರು.

ಅರಮನೆ ಮೈದಾನದಲ್ಲಿ ಶುಕ್ರವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಹಮ್ಮಿ ಕೊಂಡಿದ್ದ ವಿಶ್ವಕರ್ಮ ಸಮಾಜದ ಮುಖಂಡರ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಸಂಸ್ಥೆ ರಚನೆ
ವಿಶ್ವಕರ್ಮ ಸಮುದಾಯದ ‘ಪಂಚಕಸಬು’ಗಳ ಸ್ಥಿತಿಗತಿ, ಅವುಗಳ ಆಧುನೀಕರಣ ಮತ್ತಿತರ ವಿಷಯಗಳ ಮೇಲೂ ಬೆಳಕು ಚೆಲ್ಲಲು ವಿಶ್ವಕರ್ಮ ಸಂಸ್ಥೆ ರಚನೆಗೆ ಆದೇಶಿಸಲಾಗಿದೆ.

ಚಿತ್ರಕಲಾ ಪರಿಷತ್ತಿನ ಮಾದರಿಯಲ್ಲಿ ಪಠ್ಯವನ್ನೂ ರಚಿಸಿ, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಅದನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಇಲಾಖೆಯಿಂದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಗಾಗಿ ಎರಡು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ ಅವರು, ರಾಜ್ಯದಲ್ಲಿ ಅಪೂರ್ಣಗೊಂಡ ಸಮುದಾಯದ ಭವನಗಳನ್ನು ಪೂರ್ಣಗೊಳಿಸಲೂ ಕ್ರಮ ಕೈಗೊಳ್ಳಲಾಗುವುದು.

ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಬಾಕಿ ಇರುವ ಸುಮಾರು 82 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...