Sunday, December 7, 2025
Sunday, December 7, 2025

ಮುರ್ಮು ಅವರಿಗೆ ಬೆಂಬಲ ಪ್ರಜಾಸತ್ತೆಯ ಹೆಗ್ಗಳಿಕೆ-ಎಚ್ ಡಿಕೆ

Date:

ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜನತಾ ದಳ ಪಕ್ಷ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೊರೋನಾ ಪಾಸಿಟಿವ್‌ ಕಾರಣಕ್ಕೆ ನಾನು ವರ್ಚುಯಲ್‌ ವೇದಿಕೆ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್​ಡಿ ದೇವೇಗೌಡರು ಪ್ರಧಾನಿಗಳಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದರು. ಪ್ರಪ್ರಥಮ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಇದು ಮಾಜಿ ಪ್ರಧಾನಮಂತ್ರಿಗಳ ಆಶಯವೂ ಹೌದು. ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ತಮ್ಮ ಉಮೇದುವಾರಿಕೆ ಘೋಷಣೆಯಾದ ಮರುದಿನವೇ ದ್ರೌಪದಿ ಮುರ್ಮು ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದರು.

ಬೆಂಗಳೂರಿಗೆ ಭೇಟಿ ನೀಡಿದ್ದಾಗ ಸ್ವತಃ ಅವರೇ ಗೌಡರ ನಿವಾಸಕ್ಕೆ ಭೇಟಿ ನೀಡಿ ಮತ ಕೇಳಿದ್ದರು ಎಂದು ತಿಳಿಸಿದರು.

ದ್ರೌಪದಿ ಮುರ್ಮು ಅವರ ವ್ಯಕ್ತಿತ್ವ, ಅವರ ಹಿನ್ನೆಲೆ ಹಾಗೂ ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನಮ್ಮ ಪಕ್ಷ ಬೆಂಬಲ ಘೋಷಿಸಿದೆ. ಇಲ್ಲಿ ಪಕ್ಷಗಳ ಪ್ರಮೇಯವೇ ಇಲ್ಲ. ರಾಷ್ಟ್ರದ ಪರಮೋಚ್ಛ ಸಾಂವಿಧಾನಿಕ ಸ್ಥಾನ ರಾಷ್ಟ್ರಪತಿ ಪದವಿ. ಅದು ಪಕ್ಷ ರಾಜಕಾರಣದ ಚೌಕಟ್ಟನ್ನು ಮೀರಿದ ಹೊಣೆಗಾರಿಕೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಹೆಮ್ಮೆಯ 3 ಸೇನಾಪಡೆಗಳ ಮಹಾ ದಂಡನಾಯಕರಾಗಿ ಬುಡಕಟ್ಟು ಸಮುದಾಯದ ಓರ್ವ ಮಹಿಳೆಯೊಬ್ಬರು ಚುಕ್ಕಾಣಿ ಹಿಡಿಯುವುದು ಎಂದರೆ, ಅದು ಐತಿಹಾಸಿಕ ಗರಿಯೇ ಸರಿ. ಸಮಸ್ತ ಮಹಿಳೆಯರಿಗೆ ಮಾತ್ರವಲ್ಲ ಭಾರತ ಒಪ್ಪಿಕೊಂಡಿರುವ ಪ್ರಜಾಸತ್ತೆಯ ಹೆಗ್ಗಳಿಕೆಯೂ ಹೌದು ಎಂದು ಹೆಚ್​ಡಿಕೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...