Monday, December 15, 2025
Monday, December 15, 2025

ಜವಳಿ ಪಾರ್ಕ್ ನಿಂದ ಹತ್ತುಸಾವಿರ ಜನಕ್ಕೆ ಉದ್ಯೋಗಲಭ್ಯ- ಸೀಎಂ

Date:

ಕಾಲ ಬದಲಾಗುತ್ತಿದೆ,ಭೂಮಿ ಎಷ್ಟಿದೇ ಅಷ್ಟೇ ಇದೆ, ಜನ ಹೆಚ್ಚಾಗುತ್ತಿದ್ದಾರೆ, ಭೂಮಿ ದೊಡ್ಡದು ಮಾಡಲು ಆಗಲ್ಲ, ಭೂಮಿಯನ್ನೇ ನೆಚ್ಚಿಕೊಂಡವರು ಬದುಕು ಬದಲಾಯಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಶಿಗ್ಗಾಂವಿ ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ಜವಳಿ ಪಾರ್ಕ್​​ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸ್ವತಂತ್ರ ಬಂದಾಗ 33 ಕೋಟಿ ಜನರಿಗೆ ಆಹಾರ ನೀಡಲು ಆಗುತ್ತಿರಲಿಲ್ಲ. ರೈತ ಉಳಿದರೆ, ದೇಶ ಉಳಿಯುತ್ತದೆ. ಅವರ ಕುಟುಂಬ ಉಳಿದರೆ ದೇಶ ಉಳಿಯುತ್ತದೆ. ರೈತರ ಕುಟುಂಬದ ಆದಾಯ ಹೆಚ್ಚಾದರೆ ಎಲ್ಲರೂ ಸುಖವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ನಿಟ್ಟಿನಲ್ಲಿ ನಾನು ಅಧಿಕಾರಕ್ಕೆ ಬಂದಾಗ ಮೊದಲ ನಿರ್ಧಾರ ರೈತರ ಮಕ್ಕಳಿಗೆ ವಿದ್ಯಾನಿಧಿ ಜಾರಿಗೆ ತಂದಿರುವೆ. ವಿದ್ಯೆ ಮತ್ತು ಉದ್ಯೋಗ ನೀಡುವುದು ನನ್ನ ಮೊದಲ ಗುರಿ. ಇಲ್ಲಿ ಉದ್ಯೋಗ ಸೃಷ್ಟಿಯಾದರೆ, ಆರ್ಥಿಕ ಸಬಲೀಕರಣ ಹೊಂದುತ್ತಾರೆ. ಯಾರು ಹೆಚ್ಚು ಉದ್ಯೋಗ ನೀಡುತ್ತಾರೋ ಅವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತಿದ್ದೇವೆ. ಯಾವ ಮಹಿಳೆಯರ ದುಡ್ಡಿಗಾಗಿ ಬೇರೆಯವರು ಬಳಿ ಕೈ ಚಾಚದಂತ ಬದುಕು ನೀಡಲು ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಎಲ್ಲಾ ತಾಲೂಕಿನಲ್ಲೂ ಜವಳಿ ಪಾರ್ಕ್​​ ಸ್ಥಾಪನೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಒಟ್ಟು, ಈ ಕ್ಷೇತ್ರದಲ್ಲಿ 10 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಉದ್ಯಮಿಗಳಿಗೆ ರಪ್ತು ಮಾಡಲು ಹೆಚ್ಚಿನ ಅವಕಾಶಗಳು ಇವೆ. ರೈತರು ಬೆಳೆದ ಪದಾರ್ಥಗಳಿಗೆ ಸಂಸ್ಕರಣೆ ಮಾಡಿದರೆ ಹೆಚ್ಚಿನ ಲಾಭವಾಗಲಿದೆ. ಅದಕ್ಕಾಗಿ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದರು.

ಈ ವೇಳೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ ಸಿಇಓ ಮಹ್ಮದ್ ರೋಷನ್, ಸೇರಿದಂತೆ ಜವಳಿ ಇಲಾಖೆಯ ಅಧಿಕಾರಿಗಳು, ಟೆಕ್ಸ್ ಪೋರ್ಟ್ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...