Wednesday, February 4, 2026
Wednesday, February 4, 2026

ಉಪರಾಷ್ಡ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಎನ್ ಡಿಎ ಪರ ಅಭ್ಯರ್ಥಿ

Date:

ಭಾರತೀಯ ಜನತಾ ಪಕ್ಷ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ ರನ್ನು ಉಪ ರಾಷ್ಟ್ರಪತಿ ಚುನಾವಣೆ ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಲದ ಹಾಲಿ ರಾಜ್ಯಪಾಲ ಜಗದೀಪ್‌ ಧನ್ಕರ್‌, ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ. ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆಗಿನ ಮುಸುಕಿನ ಗುದ್ದಾಟದಿಂದಲೇ ಸುದ್ದಿಯಾದವರು.

ಮೂಲತಃ ರಾಜಸ್ಥಾನದವರಾದ ಧನ್ಕರ್‌ ಅವರು, 1951ರ ಮೇ 18ರಂದು ಕಿಥಾನಾ ಎಂಬ ಹಳ್ಳಿಯಲ್ಲಿ ಜನಿಸಿದವರು.
ಚಿತ್ತೋರ್‌ಘಡದ ಸೈನಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದ ಜಗದೀಪ್‌, ಜೈಪುರದಲ್ಲಿರುವ ರಾಜಸ್ಥಾನ
ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರೈಸಿದ್ದಾರೆ.

ಕಾನೂನು ಪದವಿ ಮುಗಿಸಿರುವ ನಂತರ ರಾಜಸ್ಥಾನ ಬಾರ್‌ ಕೌನ್ಸಿಲ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೈಪುರ ಮಹಾರಾಜ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಪದವಿ ಮತ್ತು ಎಲ್‌ಎಲ್‌ಬಿ ವ್ಯಾಸಂಗ ಮಾಡಿದ್ದಾರೆ. ಇವರ ಪತ್ನಿಯ ಹೆಸರು ಸುದೇಶ್‌ ಧನ್ಕರ್‌ ಹಾಗೂ ಓರ್ವ ಪುತ್ರಿ ಇದ್ದಾರೆ.
ರಾಜಸ್ಥಾನ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿರುವ ಇವರು ಜನತಾ ದಳದ ಮೂಲಕ ರಾಜಕೀಯ ಪ್ರವೇಶಿಸಿದ್ದರು.

ಬಳಿಕ ಬಿಜೆಪಿ ಸೇರಿ ಇಲ್ಲಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
1989-91ರ ಅವಧಿಯಲ್ಲಿ ಜನತಾದಳದಿಂದ ಝುಂಝುನು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಆಗ ಚಂದ್ರಶೇಖರ್‌ ಅವರು ಪ್ರಧಾನಿಯಾಗಿದ್ದು, ಅವರ ಸರಕಾರದಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆಯ ಸಹಾಯಕ ಸಚಿವರಾಗಿದ್ದರು.

1993ರಿಂದ 98ರ ವರೆಗೆ ಕಿಶಾನ್‌ಘಡದ ವಿಧಾನಸಭೆ ಕ್ಷೇತ್ರದ ಸದಸ್ಯರಾಗಿದ್ದರು. 2019ರ ಜು. 30ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ಇವರನ್ನು ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿ ನಿಯುಕ್ತಿಗೊಳಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...