Wednesday, March 18, 2026
Wednesday, March 18, 2026

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭ

Date:

ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ, ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ಈ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಕಂಟೋನ್ಮೆಂಟ್‌ ಮಸೂದೆ, ಮಲ್ಟಿ ಸ್ಟೇಟ್ ಕೋ-ಅಪರೇಟಿವ್‌ ಸೊಸೈಟೀಸ್‌ ಮಸೂದೆ, ತಮಿಳುನಾಡು ಮತ್ತು ಛತ್ತೀಸ್‌ಘಡದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪರಿಷ್ಕೃತ ಪಟ್ಟಿಗೆ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಒಟ್ಟು 24 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಅಷ್ಟೇ ಅಲ್ಲದೇ, ಉಭಯ ಸದನಗಳಲ್ಲಿ ಬಾಕಿ ಉಳಿದಿರುವ ಇತರೆ 8 ಮಸೂದೆಗಳು ಅನುಮೋದನೆಗೆ ಕಾಯುತ್ತಿದ್ದು, ಸಂಸತ್ತಿನಲ್ಲಿ ಮಂಡನೆಯಾಗಲಿವೆ ಎನ್ನಲಾಗಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಇಬ್ಬರು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 12 ರಂದು ಮುಕ್ತಾಯವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ...