Monday, December 15, 2025
Monday, December 15, 2025

ಖಾದಿ ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

Date:

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 10 ಯುವ ವೃತ್ತಿಪರ ಭರ್ತಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ಆಯೋಗ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಒಂದು ವರ್ಷದ ಒಪ್ಪಂದದ ಹುದ್ದೆ ಇದಾಗಿದೆ. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
ಯುವ ವೃತ್ತಿಪರರು :ಹುದ್ದೆಗಳ ಸಂಖ್ಯೆ10

ಕಾರ್ಯ ನಿರ್ವಹಣೆ ಸ್ಥಳ
ಕೇರಳ – ತಮಿಳುನಾಡು – ಕರ್ನಾಟಕ – ತೆಲಂಗಾಣ

ವೇತನ
25000-30000 ರೂ ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು27 ವರ್ಷಗಳಿಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ

ಪ್ರಮುಖ ಕೌಶಲ್ಯ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.
ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲ್ಯವನ್ನು ಕೂಡ ಹೊಂದಿರಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಕೃತ ವೆಬ್‌ಸೈಟ್: kvic.gov.in

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...