Tuesday, May 5, 2026
Tuesday, May 5, 2026

ಖಾದಿ ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

Date:

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 10 ಯುವ ವೃತ್ತಿಪರ ಭರ್ತಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ಆಯೋಗ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಒಂದು ವರ್ಷದ ಒಪ್ಪಂದದ ಹುದ್ದೆ ಇದಾಗಿದೆ. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
ಯುವ ವೃತ್ತಿಪರರು :ಹುದ್ದೆಗಳ ಸಂಖ್ಯೆ10

ಕಾರ್ಯ ನಿರ್ವಹಣೆ ಸ್ಥಳ
ಕೇರಳ – ತಮಿಳುನಾಡು – ಕರ್ನಾಟಕ – ತೆಲಂಗಾಣ

ವೇತನ
25000-30000 ರೂ ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು27 ವರ್ಷಗಳಿಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ

ಪ್ರಮುಖ ಕೌಶಲ್ಯ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.
ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲ್ಯವನ್ನು ಕೂಡ ಹೊಂದಿರಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಕೃತ ವೆಬ್‌ಸೈಟ್: kvic.gov.in

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...