Wednesday, October 2, 2024
Wednesday, October 2, 2024

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

Date:

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ 104 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಸಾಜ್​ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್​ಎಸ್​ಎಲ್​ಸಿ ರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಸರ್ಕಾರದ ಈ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 6 ಆಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳನ್ನು ನಿರ್ಧಿಷ್ಟ ಸಮಯಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈಗಾಗಲೇ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮಸಾಜ್ ಥೆರಪಿಸ್ಟ್​ ಆಗಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಈ ಹುದ್ದೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರ ಹಲವು ರಾಜ್ಯಗಳಲ್ಲಿ ಹೊಂದಿರುವ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಹುದ್ದೆ: ಮಸಾಜ್ ಥೆರಪಿಸ್ಟ್
ಹುದ್ದೆಗಳ ಸಂಖ್ಯೆ: 104
ಉದ್ಯೋಗ ಸ್ಥಳ: ದೇಶದೆಲ್ಲೆಡೆ
ವೇತನ: 35000ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಮಸಾಜ್ ಥೆರಪಿಯಲ್ಲಿ ನಿರ್ಧಿಷ್ಟ ಸರ್ಟಿಫಿಕೇಟ್​ ಕೋರ್ಸ್​ ಅಥವಾ ಮಾಸಾಜ್​ ಥೆರಪಿಯಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು:
ಅಭ್ಯರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಅರ್ಹತೆ, ಅನುಭವ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ : ಇಮೇಲ್​ ಮುಖಾಂತರ

ಇಮೇಲ್​ ವಿಳಾಸ: recruitment.massagetherapist@gmail.com

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 15 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 06 ಆಗಸ್ಟ್ 2022

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...