Wednesday, May 6, 2026
Wednesday, May 6, 2026

ವಿವಿಧ ನಿಗಮಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಡಿಯಲ್ಲಿ ಬರುವ ವಿವಿಧ ನಿಗಮಗಳ ವತಿಯಿಂದ 2022-23 ನೇ ಸಾಲಿಗೆ ನಿಗಮವಾರು ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 20 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ಆಗಸ್ಟ್ 20 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಆಸಕ್ತ ಅರ್ಹ ಫಲಾಪೇಕ್ಷಿಗಳು ನಿಗಮವಾರು ವೆಬ್‍ಸೈಟ್‍ಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ www.adcl.karnataka.gov.in,, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ www.adijambava.karnataka.gov.in, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ www.banjarathanda.kar.nic.in, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ www.kbdc.karnataka.gov.in, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ www.ksskdc.kar.nic.in ಇಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ, ದೂ.ಸಂ: 08182-224349 ನ್ನು ಸಂಪರ್ಕಿಸಬಹುದೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...