ಶ್ರೀಲಂಕಾವನ್ನು ಆರ್ಥಿಕವಾಗಿ ಮುಳುಗಿಸಿ ಜನರ ಆಕ್ರೋಶಕ್ಕೆ ಹೆದರಿ ದೇಶ ಬಿಟ್ಟು ಸಿಂಗಾಪುರಕ್ಕೆ ಓಡಿ ಹೋದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆಗೆ ಸಿಂಗಾಪುರ ಆಡಳಿತ ಬಿಗ್ ಶಾಕ್ ನೀಡಿದೆ.
ಸಿಂಗಾಪುರ ಬಿಟ್ಟು ತೆರಳುವಂತೆ ಗೊಟಬಯಗೆ ಸೂಚಿಸಿದೆ. ನೀವು ಪ್ರವಾಸಿ ವೀಸಾ ಮೇಲೆ ಬಂದಿದ್ದೀರಿ. ಅದನ್ನು ವಿಸ್ತರಿಸಲು ನಾವು ಸಿದ್ಧರಿಲ್ಲ. ನೀವಿನ್ನು ನಮ್ಮ ದೇಶದಿಂದ ಹೊರಡಬಹುದು ಎಂದು ಗೊಟಬಯಗೆ ಅಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ.
ಈ ಮಧ್ಯೆ ಶ್ರೀಲಂಕಾದಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಶಾಂತಿ ಭದ್ರತೆಯ ಕಾರಣ ನೀಡಿ ವಿಕ್ರಮಸಿಂಘೆ ತುರ್ತು ಪರಿಸ್ಥಿತಿ ಹೇರಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಆಡಳಿತಾರೂಢ ಪಕ್ಷ ಪೊಡುಜನ ಪೆರಮುನ ಚಿಂತನೆ ನಡೆಸಿದೆ. ಇದು ರಾಜಪಕ್ಸೆ ಕುಟುಂಬಕ್ಕೆ ಸೇರಿದ ಪಕ್ಷ. ಹೀಗಾಗಿ ರನಿಲ್ ಗೆಲುವು ಖಚಿತ ಎನ್ನಲಾಗುತ್ತಿದೆ.