Wednesday, March 18, 2026
Wednesday, March 18, 2026

ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ದೇವಾಲಯ ಭೇಟಿ

Date:

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ನಂತರ ಮೊದಲ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ಸಿನಿ ಶೆಟ್ಟಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವಸ್ಥಾನದ ವತಿಯಿಂದ ಅರ್ಚಕ ಶ್ರೀಧರ ತಂತ್ರಿ ಅವರ ಮೂಲಕವಾಗಿ ಪ್ರಸಾದ ನೀಡಿ ಗೌರವಿಸಲಾಯಿತು.

ಗೌರವವನ್ನು ಸ್ವೀಕರಿಸಿ ಮಾತನಾಡಿದ ಸಿನಿ ಶೆಟ್ಟಿ ಅವರು, ನಾನು ಮಾರಿಯಮ್ಮ ದೇವಿಯ ಭಕ್ತಿಯಾಗಿದ್ದು, ನಾನು ಚಿಕ್ಕವಯಸ್ಸಿನಿಂದಲೂ ನನ್ನ ತಂದೆ ತಾಯಿಯೊಂದಿಗೆ ಇಲ್ಲಿಗೆ ಬರುತ್ತಿದ್ದೆ. ಈಗ ಮಿಸ್ ಇಂಡಿಯಾ ಆಗಿ ಬರುತ್ತಿರುವುದಕ್ಕೆ ಮಾರಿಯಮ್ಮ ದೇವಿಯ ಅನುಗ್ರಹವೇ ಮುಖ್ಯ ಕಾರಣ. ಮುಂದೆ ಅಮ್ಮನ ಇದೇ ರೀತಿಯಲ್ಲಿ ಜಗದಗಲಕ್ಕೆ ಹರಡಿರುವ ಮಾರಿಯಮ್ಮ ದೇವಿಯ ಭಕ್ತರೆಲ್ಲರೂ ಶಿಲಾ ಸೇವೆ ನೀಡುವ ಮುಖಾಂತರ ಮಾರಿಗುಡಿಯ ಜೀರ್ಣೋದ್ಧಾರದಲ್ಲಿ ಕೈಜೋಡಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಪುಶ್ರೀ ಹೊಸ ಮಾರಿ ಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ...