Wednesday, December 17, 2025
Wednesday, December 17, 2025

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನಲ್ಲಿಫ್ಲೋರೈಡ್ ಅಂಶ ಆತಂಕ

Date:

ಇನ್ನು ಎರಡು ವರ್ಷದಲ್ಲಿ ದೇಶದ ಪ್ರತಿ ಮನೆಗೂ ಕೊಳಾಯಿ ಮುಖಾಂತರ ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಪ್ರಗತಿಯಲ್ಲಿರುವ ನಡುವೆಯೇ ದೇಶದ 23 ರಾಜ್ಯಗಳ 370 ಜಿಲ್ಲೆಗಳ ಅಂತರ್ಜಲದಲ್ಲಿ ಫ್ಲೋರೈಡ್ ಅಂಶ ಅಪಾಯದ ಮಟ್ಟ ಮೀರಿರುವ ವಿಚಾರ ಬಹಿರಂಗವಾಗಿದೆ.

ಬೆಂಗಳೂರು ಸೇರಿ ಕರ್ನಾಟಕದ 30 ಜಿಲ್ಲೆಗಳಲ್ಲಿ ನೀರಿನಲ್ಲಿ ಹೆಚ್ಚಿನ ಪ್ರಮಾಣದ ಫ್ಲೋರೈಡ್ ಅಂಶವಿರುವುದು ದೃಢಪಟ್ಟಿದೆ. ಫ್ಲೋರೈಡ್ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಬಗ್ಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆಗಾಗ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದುವರೆಗೆ ಫ್ಲೋರೈಡ್ ಮುಕ್ತ ನೀರು ಸೇವಿಸುವ ಭಾಗ್ಯ ಜನರಿಗೆ ಸಿಕ್ಕಿಲ್ಲ. ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿವೆ.

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಉದ್ದೇಶಕ್ಕಾಗಿ 2021-22 ವರ್ಷಕ್ಕೆ ಕೇಂದ್ರ ಸರ್ಕಾರ 5008 ಕೋಟಿ ರೂ. ಅನುದಾನ ಕೊಟ್ಟಿದೆ. 2022ರ ಮಾ.17ರವರೆಗೆ 1252 ಕೋಟಿ ರೂ. ಡ್ರಾ ಮಾಡಿಕೊಂಡಿದೆ. ಅದರಲ್ಲಿ 1208 ಕೋಟಿ ರೂ. ಖರ್ಚು ಮಾಡಿದೆ.

ದೇಶಾದ್ಯಂತ ಪ್ರಾದೇಶಿಕ ಮಟ್ಟದಲ್ಲಿ ವಿವಿಧ ವೈಜ್ಞಾನಿಕ ಅಧ್ಯಯನಗಳ ಮೂಲಕ ಕೇಂದ್ರ ಅಂತರ್ಜಲ ಮಂಡಳಿ ಅಂತರ್ಜಲ ಗುಣಮಟ್ಟದ ಮೇಲ್ವಿಚಾರಣೆ ವಹಿಸುತ್ತಿದೆ. ಅದರ ವರದಿ ಪ್ರಕಾರ 43 ಜಿಲ್ಲೆಗಳಲ್ಲಿ ಪ್ಲೋರೈಡ್​ಯುುಕ್ತ ನೀರು ಹೊಂದಿರುವ ಮಧ್ಯಪ್ರದೇಶ ಪ್ರಥಮ ಸ್ಥಾನದಲ್ಲಿದೆ. 2ನೇ ಸ್ಥಾನದಲ್ಲಿ ಉತ್ತರ ಪ್ರದೇಶ 3ನೇ ಸ್ಥಾನದಲ್ಲಿ ರಾಜಸ್ಥಾನ ಮತ್ತು 30 ಜಿಲ್ಲೆಗಳಲ್ಲಿ ಪ್ಲೋರೈಡ್​ಯುುಕ್ತ ನೀರು ಪತ್ತೆಯಾಗುವುದರೊಂದಿಗೆ ಕರ್ನಾಟಕ 4ನೇ ಸ್ಥಾನದಲ್ಲಿ ಉಳಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...