Thursday, March 19, 2026
Thursday, March 19, 2026

ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣಕ್ಕೆ ಸಮಿತಿ ರಚನೆ

Date:

ರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯ ಅಡಿಯಲ್ಲಿ ಹಾಸನ, ಹಾವೇರಿ, ಕೆ.ಆರ್. ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್ ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. ಕಾಲೇಜನ್ನು ಕೆಐಟಿ ಆಗಿ ಉನ್ನತೀಕರಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಡಗೋಪನ್ ಅವರು ಬೆಂಗಳೂರಿನ ಐಐಐಟಿಯ ಸ್ಥಾಪಕ ನಿರ್ದೇಶಕರು. ಈ ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಬೇಡಿಕೆ ಮತ್ತು ಉದ್ಯೋಗಾವಕಾಶ ಇರುವ ತಲಾ 2 ವಿಭಾಗಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ ಆಗಿ ಬೆಳೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಸಂಶೋಧನೆ, ನಾವೀನ್ಯತೆ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಉತ್ತೇಜನ ನೀಡುತ್ತಿದೆ. ಇದಕ್ಕಾಗಿ ವಿದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವ ಒಡಂಬಡಿಕೆಗಳನ್ನು ಈ ಕಾಲೇಜುಗಳು ಮಾಡಿಕೊಳ್ಳಲಿವೆ. ಈ ಮೂಲಕ ಇವುಗಳನ್ನು ಅಂತಾರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಈ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 95 ಕೋಟಿ ರೂ. ಅಗತ್ಯವಿದ್ದು, ಈಗಾಗಲೇ 21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರ್ಯಪಡೆಯು ಈ ಕಾಲೇಜುಗಳ ಉನ್ನತೀಕರಣಕ್ಕೆ ಎರಡು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ ಸಲ್ಲಿಸಲಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಈ ಕಾಲೇಜುಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಚಟುವಟಿಕೆಗಳನ್ನು ಸೂಚಿಸಲಿದೆ ಎಂದು ಸಚಿವರು ನುಡಿದಿದ್ದಾರೆ.

ಪರಿಣತರಾದ ಪ್ರೊ.ಎಲ್ ಎಸ್ ಗಣೇಶ್, ಪ್ರೊ.ಸಿ ರಾಜೇಂದ್ರ, ಪ್ರೊ. ರಾಮಗೋಪಾಲ್ ರಾವ್, ಪ್ರೊ. ಚಕ್ರವರ್ತಿ, ಪ್ರೊ.ಮಣೀಂದ್ರ ಅಗರವಾಲ್ ಮತ್ತು ಪ್ರೊ. ವೈ ನರಹರಿ ಅವರು ಈ ಕಾರ್ಯಪಡೆಯ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...