Thursday, June 18, 2026
Thursday, June 18, 2026

ಶೇ40 ಕಮೀಷನ್ ಪ್ರಕರಣ: ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ಕಾಂಗ್ರೆಸ್ ಟೀಕೆ

Date:

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆದರೂ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಈಶ್ವರಪ್ಪ ಕೇಸ್ ಕ್ಲೋಸ್ ಮಾಡಿದ್ದಾರೆ. ಇದೊಂದು ದುರ್ದೈವದ ಸಂಗತಿ. ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಎಂದು ಹೇಳಿದ್ದರು. ಆದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.

ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಗೆ ನ್ಯಾಯ ಸಿಗಲ್ಲ ಎಂದು ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಬಹುಶಃ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಹೆದರಿಸಿರಬಹುದು. ಅದಕ್ಕೆ ಹೆದರಿ ಅಧಿಕಾರಿಗಳ ಮೂಲಕ ಕೇಸ್ ಮುಚ್ಚಿಸಿರಬಹುದು. ಅವರ ಕುಟುಂಬದ ದುಃಖ ಇನ್ನೂ‌ ಮರೆಯಾಗಿಲ್ಲ. ಅಷ್ಟರೊಳಗೆ ರಿಪೋರ್ಟ್ ಹಾಕಿದ್ದಾರೆ. ಸರ್ಕಾರವೇ ಇದರಲ್ಲಿ ಶಾಮೀಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.

ಬೆಳಗಾವಿ ಮೂಲದ ಸಂತೋಷ್ ಪಾಟೀಲ್​ ಅವರು ಕಳೆದ ಏಪ್ರಿಲ್ 11ರಂದು ಉಡುಪಿಯ ಹೋಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಶ್ವರಪ್ಪ ವಿರುದ್ಧ 40 ಪರ್ಸೆಂಟ್​ ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್​ ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...