Thursday, March 19, 2026
Thursday, March 19, 2026

ವಾಹನಗಳ ಮೇಲೆ ಬಿಬಿಎಂಪಿ ಬೋರ್ಡು ನಿಷೇಧಿಸಿ ಪಾಲಿಕೆ ಆದೇಶ

Date:

ವಾಹನಗಳ ಮೇಲೆ ಬಿಬಿಎಂಪಿ ಎಂದು ನಾಮಫಲಕ ಅಳವಡಿಸುವುದನ್ನು ನಿಷೇಧಿಸಿ, ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರು ತಮ್ಮ ವಾಹನಗಳ ಮೇಲೆ ಅಳವಡಿಸುತ್ತಿದ್ದಂತ ನಾಮಫಲಕ ನಿಷೇಧಿಸಿ ಆದೇಶಿಸಿದೆ.

ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಿಭಾಗ ಮತ್ತು ಯೋಜನಾ ವಿಭಾಗದ ವಿಶೇಷ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಹಾಗೂ ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು ಪಾಲಿಕೆಯ ಮೂಲಕ ಬಿಬಿಎಂಪಿ ಸೇವೆಯಲ್ಲಿ,ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ನಮೂದಿಸಿಕೊಂಡು ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದಿದ್ದಾರೆ.

ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ ಮಾಡುವ ವಾಹನಗಳ‌ ಮೇಲೆ ಪಾಲಿಕೆಯ ಸೇವೆಯಲ್ಲಿ ಎಂದು ನಮೂದಿಸಿಕೊಂಡು ಅಥವಾ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಇದರಿಂದ ವಾಹನಗಳ ಅಪಘಾತಗಳಾದಾಗ ಬಿಬಿಎಂಪಿಯ ವಾಹನದಿಂದ ಅಪಘಾತವಾಗುತ್ತಿದೆ ಎಂದು ದಿನಪತ್ರಿಕೆಗಳಲ್ಲಿ ಅಥವಾ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದರಿಂದ ಪಾಲಿಕೆಯ ಮೇಲೆ ತಪ್ಪು ಪರಿಕಲ್ಪನೆ ಮೂಡುತ್ತಿರುತ್ತದೆ.

ಹಾಗಾಗಿ,ಮುಂದಿನ ದಿನಗಳಲ್ಲಿ ವಾಹನಗಳ‌ ಮೇಲೆ ಅನಧಿಕೃತವಾಗಿ ಪಾಲಿಕೆಯ ಹೆಸರನ್ನು ನಮೂದಿಸುವುದು ಅಥವಾ ನಾಮಫಲಕಗಳನ್ನು ಹಾಕುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ‌ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...