Sunday, December 14, 2025
Sunday, December 14, 2025

ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ-ರಾಮನಾಥ್ ಕೋವಿಂದ್

Date:

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದೆ.ನಿನ್ನೆ ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆದಿದ್ದಾರೆ.

ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...