Sunday, August 2, 2026
Sunday, August 2, 2026

ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ-ರಾಮನಾಥ್ ಕೋವಿಂದ್

Date:

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದೆ.ನಿನ್ನೆ ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆದಿದ್ದಾರೆ.

ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...