Thursday, June 18, 2026
Thursday, June 18, 2026

ಬೆಂಗಳೂರು- ಮಂಗಳೂರು ರೈಲ್ವೇ ಸಂಚಾರ ಬೇಡಿಕೆಗೆ ರೈಲ್ವೆ ಮಂಡಳಿ ಸ್ಪಂದನೆ

Date:

ಮಂಗಳೂರು ಸೆಂಟ್ರಲ್‌ -ಕೆಎಸ್‌ಆರ್‌ ಬೆಂಗಳೂರು ನಡುವೆ ಮೈಸೂರು ಮಾರ್ಗದಲ್ಲಿ ಜುಲೈ 26ರಿಂದ ಆಗಸ್ಟ್‌ 31ರ ತನಕ ವಾರದಲ್ಲಿ 3 ದಿನ ಹೆಚ್ಚುವರಿಯಾಗಿ ವಿಶೇಷ ರೈಲು ಸಂಚರಿಸಲಿದೆ.

ನಂ. 06547 ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಡಲಿದ್ದು ಮಂಗಳೂರು ಸೆಂಟ್ರಲ್‌ಗೆ ಬೆಳಗ್ಗೆ 9.05ಕ್ಕೆ ತಲುಪಲಿದೆ. ಮಂಗಳವಾರ, ಗುರುವಾರ ಹಾಗೂ ರವಿವಾರ ಸಂಚರಿಸಲಿದೆ. ಕೆಂಗೇರಿಗೆ 8.49ಕ್ಕೆ, ರಾಮನಗರ 9.13ಕ್ಕೆ, ಚನ್ನರಾಯಪಟ್ಟಣ 9.24ಕ್ಕೆ, ಮಂಡ್ಯ 9.54ಕ್ಕೆ, ಮೈಸೂರು 11ಕ್ಕೆ, ಕೃಷ್ಣರಾಜನಗರ 11.49ಕ್ಕೆ, ಹೊಳೆನರಸಿಪುರ 12.43ಕ್ಕೆ, ಹಾಸನ 1.35ಕ್ಕೆ, ಸಕಲೇಶಪುರ ಬೆಳಗ್ಗೆ 3ಕ್ಕೆ, ಸುಬ್ರಹ್ಮಣ್ಯ ರೋಡ್‌ 6.10ಕ್ಕೆ, ಕಬಕಪುತ್ತೂರು 7ಕ್ಕೆ, ಬಂಟ್ವಾಳ 7.30ಕ್ಕೆ, ಮಂಗಳೂರು ಜಂಕ್ಷನ್‌ 8.13ಕ್ಕೆ, ಮಂಗಳೂರು ಸೆಂಟ್ರಲ್‌ 9.05ಕ್ಕೆ ಆಗಮಿಸಲಿದೆ.

ಬೆಂಗಳೂರಿಗೆ ತೆರಳುವ ಮಾರ್ಗದ ಘಾಟಿ ಪ್ರದೇಶಗಳಲ್ಲಿ ಭೂಕುಸಿತದ ಹಿನ್ನೆಲೆಯಲ್ಲಿ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂಬ ಬೇಡಿಕೆಗೆ ರೈಲ್ವೇ ಮಂಡಳಿ ತ್ವರಿತವಾಗಿ ಸ್ಪಂದಿಸಿದೆ.

ನಂ. 06548 ಮಂಗಳೂರಿನಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸಂಚರಿಸಲಿದೆ. ಸಂಜೆ 6.35ಕ್ಕೆ ಹೊರಡುವ ರೈಲು ಮಂಗಳೂರು ಜಂಕ್ಷನ್‌ಗೆ 6.48ಕ್ಕೆ, ಬಂಟ್ವಾಳ 7.20ಕ್ಕೆ, ಕಬಕಪುತ್ತೂರು 7.48, ಸುಬ್ರಹ್ಮಣ್ಯ ರೋಡ್‌ ರಾತ್ರಿ 8.40ಕ್ಕೆ, ಸಕಲೇಶಪುರ 11.20ಕ್ಕೆ, ಹಾಸನ 12.25ಕ್ಕೆ, ಹೊಳೆನರಸಿಪುರ 1.13ಕ್ಕೆ, ಕೃಷ್ಣರಾಜನಗರ 2.08ಕ್ಕೆ, ಮೈಸೂರು ಬೆಳಗ್ಗೆ 3ಕ್ಕೆ, ಮಂಡ್ಯ 3.54ಕ್ಕೆ, ಚನ್ನರಾಯಪಟ್ಟಣ 4.30ಕ್ಕೆ, ರಾಮನಗರ 4.42ಕ್ಕೆ, ಕೆಂಗೇರಿ 5.11ಕ್ಕೆ, ಬೆಂಗಳೂರು ಕೆಎಸ್‌ಆರ್‌ ನಿಲ್ದಾಣಕ್ಕೆ ಬೆಳಗ್ಗೆ 6.15ಕ್ಕೆ ತಲುಪಲಿದೆ.
ರೈಲು 2 ಟೈಯರ್‌ಎಸಿ 2, ಎಸಿ 3 ಟೈಯರ್‌ 2, 9 ಸೆಕೆಂಡ್‌ ಕ್ಲಾಸ್‌ ಸ್ಲೀಪರ್ , ಎರಡು ಜನರಲ್‌ ಸೆಕೆಂಡ್‌ ಕ್ಲಾಸ್‌ ಬೋಗಿ ಸೇರಿದಂತೆ ಒಟ್ಟು 14 ಬೋಗಿಗಳನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...