Saturday, September 28, 2024
Saturday, September 28, 2024

ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಏಕದಿನ ಸರಣಿಭಾರತದ ಮಡಿಲಿಗೆ

Date:

ವೆಸ್ಟ್‌ಇಂಡೀಸ್‌ ತಂಡ ನೀಡಿದ ಬೃಹತ್‌ ಗುರಿಯನ್ನ ಬೆನ್ನತ್ತಿ ಎರಡನೇ ಪಂದ್ಯದಲ್ಲಿ ಗೆಲ್ಲುವ ಮುಖಾಂತರ ಭಾರತ ತಂಡ ಸರಣಿಯನ್ನ ಕೈವಶ ಮಾಡಿಕೊಂಡಿದೆ.

ಇದರ ಜೊತೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆಯನ್ನ ಸಾಧಿಸಿದೆ.

ಆತಿಥೇಯರ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಕೆರಿಬಿಯನ್ನರು 311 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದ್ದರು. ಆದರೆ, ಮೊದಲ ಪಂದ್ಯದಲ್ಲಿ 97 ರನ್‌ ಗಳಿಸಿದ್ದ ನಾಯಕ ಶಿಖರ್‌ ಧವನ್‌ ಇಂದಿನ ಪಂದ್ಯದಲ್ಲಿ ಕೇವಲ 13 ರನ್‌ ಗಳಿಸಿ ಔಟಾಗಿದ್ದರು. ಬಳಿಕ ಬಂದ ಶ್ರೇಯಸ್‌ ಅಯ್ಯರ್‌(63), ಶುಭಮನ್‌ ಗಿಲ್‌(43) ಸಂಜು ಸ್ಯಾಮನ್ಸನ್‌(54), ದೀಪಕ್‌ ಹೂಡಾ(33) ಮತ್ತು ಅಕ್ಸರ್‌ ಪಟೇಲ್‌(64) ಅವರ ಜವಾಬ್ದಾರಿ ಆಟದಿಂದ ಟೀಂ ಇಂಡಿಯಾ ಗೆಲುವನ್ನು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ್ದ ವಿಂಡೀಸ್‌ ತಂಡದ ಪರ ಶಾಯ್ ಹೋಪ್‌ ಆಕರ್ಷಕ 115 ರನ್‌ ಗಳಿಸಿ ಶತಕದ ಸಂಭ್ರಮಪಟ್ಟಿದ್ದರು. ಬಳಿಕ ಬಂದ ಶಮರ್ ಬ್ರೂಕ್ಸ್(35), ಕೆ ಮೇಯರ್ಸ್(39) ಹಾಗೂ ಪೂರನ್‌ 75 ರನ್‌ ಸೇರಿದಂತೆ ಉಳಿದ ಆಟಗಾರರು ತಂಡಕ್ಕೆ ನೀಡಿದ ರನ್‌ ಕೊಡುಗೆಯಿಂದ ವಿಂಡೀಸ್‌ ತಂಡ ಅಂತಿಮವಾಗಿ 6 ವಿಕೆಟ್‌ ಕಳೆದುಕೊಂಡು 311 ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿತ್ತು.

ಭಾರತದ ಪರ ಶಾರ್ದೂಲ್ ಠಾಕೂರ್‌ 3, ದೀಪಕ್‌ ಹೂಡಾ, ಅಕ್ಸರ್‌ ಪಟೇಲ್‌ ಹಾಗೂ ಯಜುವೇಂದ್ರ ಚಹಾಲ್‌ ತಲಾ ಒಂದು ವಿಕೆಟ್‌ ಕಬಳಿಸಿದ್ದರು. ಇನ್ನು ವಿಂಡೀಸ್‌ ತಂಡದ ಪರ ಅಲ್ಜಾರಿ ಜೋಸೆಫ್(2), ಕೈಲ್ ಮೇಯರ್ಸ್(2) ರೊಮಾರಿಯೋ ಶೆಫರ್ಡ್ ಹಾಗೂ ಕೈಲ್ ಮೇಯರ್ಸ್ ತಲಾ 1 ವಿಕೆಟ್‌ ಪಡೆದು ಸಂಭ್ರಮಿಸಿದರು. 3 ಹಾಗೂ ಅಂತಿಮ ಏಕದಿನ ಪಂದ್ಯ ಜು.27 ರಂದು ಟ್ರಿನಿಡ್ಯಾಡ್‌ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...