Wednesday, July 8, 2026
Wednesday, July 8, 2026

ಪ್ರಕೃತಿ ಮಾತೆ ತೀವ್ರ ಸಂಕಷ್ಟದಲ್ಲಿದ್ದಾಳೆ- ರಾಮನಾಥ್ ಕೋವಿಂದ್

Date:

ಪ್ರಕೃತಿ ಮಾತೆ ತೀವ್ರ ಸಂಕಟದಲ್ಲಿದ್ದಾಳೆ. ಹವಾಮಾನ ಬಿಕ್ಕಟ್ಟು ಈ ಗ್ರಹದ ಭವಿಷ್ಯವನ್ನೇ ಅಪಾಯಕ್ಕೀಡು ಮಾಡಬಹುದು ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ ಭಾನುವಾರ ದೇಶವನ್ನು ಉದ್ದೇಶಿಸಿ ವಿದಾಯದ ಭಾಷಣ ಮಾಡಿದ್ದಾರೆ.

ಅವರು ಮುಂದೆ ಬರುವ ಪೀಳಿಗೆಗೆ ಪರಿಸರವನ್ನು ರಕ್ಷಿಸಲು ಎಲ್ಲರಿಗೂ ಮನವಿ ಮಾಡಿಕೊಂಡಿದ್ದಾರೆ.

21 ನೇ ಶತಮಾನವನ್ನು ಭಾರತದ ಶತಮಾನ ಮಾಡಲು ದೇಶವು ಸಜ್ಜಾಗುತ್ತಿದೆ. ಆರ್ಥಿಕ ಸುಧಾರಣೆಗಳ ಜೊತೆಗೆ ನಾಗರಿಕರು ತಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳುವ ಮೂಲಕ ಸಂತೋಷವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಕೋವಿಂದ್ ಅವರು ತಿಳಿಸಿದ್ದಾರೆ.

ರಾಷ್ಟ್ರವನ್ನುದ್ದೇಶಿಸಿ ರಾಮನಾಥ್ ಕೋವಿಂದ್ ಅವರು, ಒಮ್ಮೆ ಶಿಕ್ಷಣ ಹಾಗೂ ಆರೋಗ್ಯವು ಜಾರಿಯಾದರೆ, ಆರ್ಥಿಕ ಸುಧಾರಣೆಗಳು ನಾಗರಿಕರು ತಮ್ಮ ಜೀವನಕ್ಕೆ ಉತ್ತಮ ಮಾರ್ಗವನ್ನು ಕಂಡುಕೊಳ್ಳಲು ಅನುವು ಮಾಡಿಕೊಡುತ್ತದೆ. ನಮ್ಮ ದೇಶವು 21 ನೇ ಶತಮಾನವನ್ನು ಭಾರತದ ಶತಮಾನವನ್ನಾಗಿ ಮಾಡಲು ಸಜ್ಜುಗೊಳ್ಳುತ್ತಿದೆ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ಹೇಳಿದ್ದಾರೆ.

ಪ್ರಕೃತಿ ತಾಯಿಯು ಸಂಕಟದಲ್ಲಿದ್ದಾಳೆ. ನಾವು ನಮ್ಮ ಪರಿಸರ, ನಮ್ಮ ಭೂಮಿ, ಗಾಳಿ ಮತ್ತು ನೀರನ್ನು ನಮ್ಮ ಮಕ್ಕಳ ಸಲುವಾಗಿ ಕಾಳಜಿ ವಹಿಸಬೇಕು. ನಮ್ಮ ದೈನಂದಿನ ಜೀವನದಲ್ಲಿ ಹಾಗೂ ದಿನನಿತ್ಯದ ಆಯ್ಕೆಗಳಲ್ಲಿ, ನಮ್ಮ ಮರಗಳು, ನದಿಗಳು, ಸಮುದ್ರಗಳು ಹಾಗೂ ಪರ್ವತಗಳ ಜೊತೆಗೆ ಇತರ ಎಲ್ಲಾ ಜೀವಿಗಳನ್ನು ರಕ್ಷಿಸಲು ನಾವು ಹೆಚ್ಚು ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...