Monday, December 15, 2025
Monday, December 15, 2025

ವಾಯುಮಾಲಿನ್ಯ ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿದೆ

Date:

ಬೆಂಗಳೂರು ಸೋಮವಾರ ಬೆಳಗ್ಗೆ ಅತ್ಯಂತ ಕೆಟ್ಟ ವಾಯು ಗುಣಮಟ್ಟ ಸೂಚ್ಯಂಕ ಹೊಂದಿರುವ ಭಾರತದ ಅಗ್ರ ನಗರಗಳಲ್ಲಿ ಒಂದಾಗಿದೆ.

ಬೆಳಿಗ್ಗೆ 7.30ಕ್ಕೆ ನಗರವು 101ರ ವಾಯು ಗುಣಮಟ್ಟ ಸೂಚ್ಯಂಕವನ್ನ ದಾಖಲಿಸಿದ್ದು, ಭಾರತದ ಅತ್ಯಂತ ಕಲುಷಿತ ನಗರಗಳಲ್ಲಿ 6ನೇ ಸ್ಥಾನದಲ್ಲಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ, ಪಂಜಾಬ್‌ನ ರೂಪನಗರ 141 ಎಕ್ಯೂಐನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ, ಧರುಹೇರಾ, ದೆಹಲಿ ಮತ್ತು ಚಂದ್ರಾಪುರ ಕ್ರಮವಾಗಿ 113, 114, 106 ಮತ್ತು 104 ರೀಡಿಂಗ್‌ಗಳೊಂದಿಗೆ ನಂತರದ ಸ್ಥಾನಗಳಲ್ಲಿವೆ.

ಸೋಮವಾರ ಮಧ್ಯಾಹ್ನ 1 ಗಂಟೆಯ ಹೊತ್ತಿಗೆ, ಬೆಂಗಳೂರಿನಲ್ಲಿ ಎಕ್ಯೂಐ ತೃಪ್ತಿಕರ ಮಟ್ಟಕ್ಕೆ ಮರಳಿದ್ದು, ಅದು 67ಕ್ಕೆ ಇಳಿಯಿತು ಎಂದಿದೆ. ಆದಾಗ್ಯೂ, ಬಿಟಿಎಂ ಲೇಔಟ್ 101 ರೀಡಿಂಗ್ ದಾಖಲಿಸುವುದನ್ನ ಮುಂದುವರಿಸಿದ್ದು, ಇದು ನಗರದ ಅತ್ಯಂತ ಕಲುಷಿತ ಪ್ರದೇಶವೆಂದು ನೋಂದಾಯಿಸಲ್ಪಟ್ಟಿತು.
ಸಿಪಿಸಿಬಿ ಪ್ರಕಾರ, 100ಕ್ಕಿಂತ ಹೆಚ್ಚಿನ ಎಕ್ಯೂಐ ಮೌಲ್ಯವನ್ನ ಮಧ್ಯಮವಾಗಿ ತೀವ್ರ ಮತ್ತು ಉಸಿರಾಟದ ಸಮಸ್ಯೆ ಇರುವ ಜನರಲ್ಲಿ ತೊಂದರೆಗಳನ್ನ ಉಂಟುಮಾಡಬಹುದು ಎಂದು ಪರಿಗಣಿಸಲಾಗುತ್ತದೆ.

ಇನ್ನು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟವು ಈಗ ಕೆಲವು ಸಮಯದಿಂದ ನಾಗರಿಕರನ್ನು ಚಿಂತೆಗೀಡು ಮಾಡುತ್ತಿದೆ.
ಜನವರಿಯಲ್ಲಿ ಗ್ರೀನ್ ಇಂಡಿಯಾ ಎಂಬ ಸಂಸ್ಥೆಯ ವರದಿಯ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳಿಗಿಂತ ವಾಯುಮಾಲಿನ್ಯ ಹೆಚ್ಚಿರುವ ದಕ್ಷಿಣ ಭಾರತದ 10 ನಗರಗಳಲ್ಲಿ ಬೆಂಗಳೂರು ಸ್ಥಾನ ಪಡೆದಿದೆ.

ಸಿಪಿಸಿಬಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಗರದಾದ್ಯಂತ ಮಾಲಿನ್ಯ ಮಟ್ಟವನ್ನು ಪತ್ತೆಹಚ್ಚಲು 10 ಮೇಲ್ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಿವೆ. ಬಿಟಿಎಂ ಲೇಔಟ್, ಬಾಪೂಜಿ ನಗರ, ಹೊಂಬೇಗೌಡ ನಗರ, ಜಯನಗರ 5ನೇ ಬ್ಲಾಕ್, ಸಿಟಿ ರೈಲ್ವೆ ನಿಲ್ದಾಣ, ಸಾಣೇಗುರುವನಹಳ್ಳಿ, ಹೆಬ್ಬಾಳ, ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ಬಿಡಬ್ಲ್ಯೂಎಸ್‌ಎಸ್ಬಿ ಕಡುಬೀಸನಹಳ್ಳಿಗಳಲ್ಲಿ ಮಾಲಿನ್ಯವನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...