Wednesday, July 16, 2025
Wednesday, July 16, 2025

ರಾಜ್ಯ ಸರ್ಕಾರಿ ನೌಕರರಿಗೆ ಸಮಯಪಾಲನೆ ಆದೇಶ

Date:

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು. ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡೆ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...