Thursday, February 5, 2026
Thursday, February 5, 2026

ರಾಜ್ಯದ ಹಲವೆಡೆ ವರುಣನ ಕೃಪೆ:ಉಕ್ಕಿ ಹರಿದ ಜಲಾಶಯಗಳು

Date:

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ ಸುರಿಯಲಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...