ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 1 ವರ್ಷ ಪೂರೈಸಿದ ಹಿನ್ನೆಲೆ ಜುಲೈ 28ರಂದು ಚಿಕ್ಕಬಳ್ಳಾಪುರದಲ್ಲಿ ವರ್ಷಾಚರಣೆ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.
ಭ್ರಷ್ಟ ಹಣದಿಂದಲೇ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ಈ ಸರ್ಕಾರದ ವರ್ಷದ ಸಂಭ್ರಮವನ್ನು ಭ್ರಷ್ಟೋತ್ಸವ ಎಂದು ಕರೆದರೆ ಅರ್ಥಪೂರ್ಣವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಶೇ. 40 ರಷ್ಟು ಕಮಿಷನ್, ಗುತ್ತಿಗೆದಾರ ಆತ್ಮಹತ್ಯೆ, ಪಿಎಸ್ಐ ನೇಮಕಾತಿ ಹಾಗೂ ಉಪನ್ಯಾಸಕರ ನೇಮಕಾತಿ ಹಗರಣಗಳು ಬಿಜೆಪಿ ಸರ್ಕಾರದ ವರ್ಷದ ಸಾಧನೆಯಾಗಿದೆ.
ಇಷ್ಟೆಲ್ಲಾ ಆರೋಪಗಳಿದ್ದರೂ ಒಮ್ಮೆಯೂ ತಮ್ಮನ್ನು ತಾವು ನ್ಯಾಯಯುತ ತನಿಖೆಗೆ ಒಳಪಡಿಸಿಕೊಳ್ಳದೆ ಸರ್ಕಾರ ಭಂಡತನ ಮೆರೆದಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.
ಆಪರೇಷನ್ ಕಮಲದ ಮೂಲಕ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು, ಜುಲೈ 26, ಬಸವರಾಜ್ ಬೊಮ್ಮಾಯಿಯವರು ಆರ್ ಎಸ್ ಎಸ್ ನಿಂದ ನೇಮಕಗೊಂಡದ್ದು ಜುಲೈ 28ರಂದು. ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಆಪರೇಷನ್ ಕಮಲದ ಮೂಲಕ ಬಿ ಎಸ್ ವೈ ಅವರು ಮುಖ್ಯಮಂತ್ರಿಯಾಗಿದ್ದು ಜುಲೈ 26, ಬೊಮ್ಮಾಯಿ ಅವರು ಆರ್.ಎಸ್.ಎಸ್ ನಿಂದ ನೇಮಕಗೊಂಡದ್ದು ಜುಲೈ 28.
ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ
15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತರಲಾಗದೆ ಕೇಂದ್ರದ ಬಿಜೆಪಿ ನಾಯಕರ ಎದುರು ಮಂಡಿಯೂರಿ ಶರಣಾದ ಬಸವರಾಜ್ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಎಸಗಿದ ದ್ರೋಹವನ್ನೇ ಸಂಭ್ರಮಾಚರಣೆ ಮಾಡಲು ಹೊರಟಿದೆಯೇ ಎಂದು ಟ್ವೀಟ್ ಮುಖಾಂತರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.