Thursday, February 5, 2026
Thursday, February 5, 2026

ಕಾನೂನಿನ್ವಯ ಬೇಬಿ ಬೆಟ್ಟ ಅರಮನೆ ಆಸ್ತಿ ಅಲ್ಲಿ ಬ್ಲಾಸ್ಟ್ ಬೇಡ- ಪ್ರಮೋದಾ ದೇವಿ

Date:

ವಿಶ್ವವಿಖ್ಯಾತ ಕೆಆರ್​ಎಸ್​ ಅಣೆಕಟ್ಟಿಗೆ ಗಣಿಗಾರಿಕೆಯಿಂದ ಸಮಸ್ಯೆ ಇದೆಯೇ,ಇಲ್ಲವೇ ಎಂಬುದನ್ನು ತಿಳಿಯಲು ಮಂಡ್ಯದ ಬೇಬಿ ಬೆಟ್ಟದಲ್ಲಿ ಟಟ್ರಯಲ್ ಬ್ಲಾಸ್ಟ್ ನಡೆಸಲು ಉದ್ದೇಶಿಸಲಾಗಿದೆ. ಈ ಕುರಿತು ಪರವಿರೋಧ ಅಭಿಪ್ರಾಯಗಳನ್ನು ವ್ಯಕ್ತವಾಗಿದೆ. ರೈತರಿಂದ ಪ್ರತಿಭಟನೆಯೂ ನಡೆದಿದೆ.

ಈ ನಡುವೆ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದು ಖಾಸಗಿ ಆಸ್ತಿ, ಟ್ರಯಲ್ ಬ್ಲಾಸ್ಟ್​​ಗೆ ತಜ್ಞರು ಸರ್ಕಾರಿ ಜಾಗ ಗುರುತಿಸಿ ಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

1950ರ ಕಾಲದಿಂದ ಆ ಬೆಟ್ಟದ 1,650 ಎಕರೆ ನಮ್ಮದು. ಭಾರತ ಸರ್ಕಾರದ ಜೊತೆ ಮೈಸೂರು ಸಂಸ್ಥಾನ ಮಾಡಿಕೊಂಡ ಆಸ್ತಿ ಹಂಚಿಕೆಯ ಪತ್ರದಲ್ಲಿ ಬೇಬಿ ಬೆಟ್ಟ ಇದೆ. ಇದು ಖಾಸಗಿ ಆಸ್ತಿ, ಬೇಬಿ ಬೆಟ್ಟದ ಜಾಗವನ್ನು ಉದ್ದೇಶಪೂರ್ವಕವಾಗಿ ಬಿ ಖರಬ್ ಪಟ್ಟಿಗೆ ಸೇರಿಸಲಾಗಿತ್ತು.

ಹೀಗಾಗಿ, ನಾನು ಆ ಜಾಗದ ವಿಚಾರದಲ್ಲಿ ನಾನು ಕೋರ್ಟ್​​ಗೆ ಹೋಗಿರಲಿಲ್ಲ. ಮೈಸೂರಿನ ಕುರುಬರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್​​ನಲ್ಲಿ ಅರಮನೆಗೆ ಜಯವಾಗಿದೆ. ಆ ತೀರ್ಪು ಈ ಬೆಟ್ಟದ ಜಾಗಕ್ಕೂ ಅನ್ವಯ. ಆ ಜಾಗ ನಮ್ಮ ವ್ಯಾಪ್ತಿಗೆ ಬಂದರೆ ನಾನು ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲ್ಲ. ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ನಾವೇನೂ ಯಾರದ್ದೋ ಆಸ್ತಿ ಕಬಳಿಸಲು ಹೊರಟ್ಟಿದ್ದೇವೆ ಎಂಬ ರೀತಿ ಸರ್ಕಾರಗಳು ಯೋಚಿಸುತ್ತಿವೆ.

ಇದು ನಮಗೆ ಸರ್ಕಾರಗಳು ಕೊಡುತ್ತಿರುವ ಕಿರುಕುಳ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರ್ಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹತ್ತು ರೂಪಾಯಿ ಬೆಲೆ ಬಾಳುವುದನ್ನು ಹತ್ತು ಪೈಸೆಗೆ ತೆಗೆದು ಕೊಳ್ಳುವ ಮನಸ್ಥಿತಿ ಸರ್ಕಾರ ಪ್ರದರ್ಶಿಸುತ್ತಿದೆ. ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತಿದ್ದೇನೆ.

ಇವರಿಂದ ನನ್ನ ಕಾನೂನು ಜ್ಞಾನ ಹೆಚ್ಚಾಯಿತು. ಬೇಬಿ ಬೆಟ್ಟದ ವಿಚಾರದಲ್ಲಿ ಈಗ ಕಾನೂನುತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ. ನಾನು ಪ್ರತಿಭಟನೆ ಸ್ಥಳಕ್ಕೆ ಹೋಗುವುದಿಲ್ಲ. ಕೆಆರ್​ಎಸ್​ ಜಲಾಶಯದ ದೃಷ್ಟಿಯಿಂದ ಅಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವುದು ಕೂಡ ಸರಿಯಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...