Thursday, August 6, 2026
Thursday, August 6, 2026

ಪ್ರವೀಣ್ ಹತ್ಯೆ ಪ್ರಕರಣ ತನಿಖೆ: ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಚಿಂತನೆ

Date:

ಮಂಗಳೂರಿನಲ್ಲಿ ನಡೆದ ಪ್ರವೀಣ್ ಹತ್ಯೆ ಪ್ರಕರಣವನ್ನು ಅಗತ್ಯವಿದ್ದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಿಕೊಡಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಪ್ರವೀಣ್ ಹತ್ಯೆ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.
ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ ಎಂದರು.

ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದರು.

ಮಂಗಳೂರು ಹಾಗೂ ಕಾಸರಗೋಡು ಎಸ್ಪಿಗಳೊಂದಿಗೆ ಮಾತನಾಡಿದ್ದೇನೆ.
ಕರ್ನಾಟಕ ಡಿಜಿಪಿ, ಕೇರಳದ ಡಿಜಿಪಿಯವರೊಂದಿಗೆ ಮಾತನಾಡಿದ್ದಾರೆ. ಇಂದು ಕೂಡ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡಿಜಿಯವರನ್ನು ಕರೆಸಿ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲಿಯೇ ಕೊಲೆಗೈದವರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಹಿಂದೆ ಮಂಗಳೂರು, ಡಿ.ಜೆ.ಹಳ್ಳಿ, ಶಿವಮೊಗ್ಗದ ಪ್ರಕರಣಗಳಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಘಟನೆಯ ಹಿಂದಿರುವ ವ್ಯಕ್ತಿಗಳು, ಸಂಘಟನೆಗಳು ಯಾರೇ ಇದ್ದರೂ ಅವರನ್ನು ಸದೆಬಡಿಯುವ ಕೆಲಸವನ್ನು ಮಾಡಲಾಗುವುದು. ಜನರು ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಹಾಗೂ ಈ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದೆ ತನಿಖೆಗೆ ಎಲ್ಲರೂ ಸಹಕರಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...