Monday, April 27, 2026
Monday, April 27, 2026

ಕ್ರಿಕೆಟ್ ಏಕದಿನ ಸರಣಿ ಮೂರನೇ ಪಂದ್ಯದಲ್ಲೂ ಶರಣಾದ ವೆಸ್ಟ್ ಇಂಡೀಸ್: ಭಾರತಕ್ಕೆ ಸರಣಿ

Date:

ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 119 ರನ್ ಗಳ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ನೀಡಿದ 226 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ವಿಂಡೀಸ್ ವಿರುದ್ಧ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ನಂತರ ಬೌಲಿಂಗ್ ಸೇರಿದಂತೆ ಆಲ್ರೌಂಡ್ ಪ್ರದರ್ಶನ ನೀಡಿದ ಭಾರತ ತಂಡ ಮೂರನೇ ಪಂದ್ಯದಲ್ಲಿ ಅರ್ಹವಾಗಿಯೇ ಜಯ ಸಾಧಿಸಿತು.

ಭಾರತ ನೀಡಿದ 226 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಬ್ರಾಂಡನ್ ಕಿಂಗ್, ನಾಯಕ ಪೂರನ್, ಶಾಯ್ ಹೋಪ್ ಮತ್ತು ಹೇಡನ್ ವಾಲ್ಶ್ ಬಿಟ್ಟರೆ ಉಳಿದ ಯಾವ ಬ್ಯಾಟರ್ ನಿಂದಲೂ ಎರಡಂಕಿ ಮೊತ್ತ ಬರಲಿಲ್ಲ. ವಿಂಡೀಸ್ 4 ಬ್ಯಾಟರ್ ಗಳು ಶೂನ್ಯ ಸುತ್ತಿದ್ದರೆ, 3 ಮಂದಿ ಒಂದಂಕಿ ಮೊತ್ತಕ್ಕೆ ಔಟಾದರು. ಇದು ಭಾರತ ಪ್ರಭಾವಿ ಬೌಲಿಂಗ್ ಹಾಗೂ ಫೀಲ್ಡಿಂಗ್ ಸಾಕ್ಷಿಯಾಗಿತ್ತು.

ಅಂತಿಮವಾದಿ ವಿಂಡೀಸ್ ತಂಡ 26 ಓವರ್ ಗಳಲ್ಲಿ ಕೇವಲ 137 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳ ಅಂತರದಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿತು. ಈ ಸೋಲಿನ ಮೂಲಕ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸರಣಿ ಜಯ ಸಾಧಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ 'ನಾರಿ ಶಕ್ತಿ...

Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ

Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ...