Monday, September 21, 2026
Monday, September 21, 2026

ಯಾವ ತನಿಖೆಯೇ ಮಾಡಲಿ ಪೋಲಿಸರು ವಿಫಲರಾಗಿದ್ದಾರೆ- ಡಿ ಕೆ ಶಿವಕುಮಾರ್

Date:

ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಎಂದು ತೆಗೆದುಕೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ. ಕಳೆದ 15 ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿದೆ. ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ. ಯಾರು ಇದರಲ್ಲಿ ಭಾಗಿಯಾಗಿದ್ದಾರೆಂದು ಡಿಜಿಪಿ ಇಲ್ಲವೇ ಎಸ್‌ಪಿ ಹೇಳಬೇಕು.

ಇತಂಹ ಕೊಲೆಗಳು ರಾಜಕೀಯವಾಗಿ ಆಯ್ತಾ, ಖಾಸಗೀಯಾಗಿ ಆಯಿತಾ, ಬೇರೆ ಉದ್ದೇಶದಿಂದ ಆಯ್ತಾ ಅಂತಾ ಪೊಲೀಸ್ ಅಧಿಕಾರಿಗಳು ಪ್ರಾಮಾಣೀಕರಿಸಬೇಕು. ತನಿಖೆ‌ ಮಾಡಿ ಯಾರೇ ಆದರೂ, ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು, ಸರ್ಕಾರ ವಿಫಲವಾಗಿದೆ. ಸುಮ್ಮನೆ ಬಾಳೆಹಣ್ಣು ತಿಂದು ಸಿಪ್ಪೆನಾ ಬೇರೆ ಬಾಯಿಗೆ ಒರಸುವ ಪ್ರಯತ್ನ ಮಾಡಬಾರದು. ತನಿಖೆ ನಡೆಯಲಿ, ಅವರನ್ನು ಬಂಧಿಸಬೇಕು. ಸತ್ಯಾಂಶವನ್ನು ಹೊರಗೆ ಬರಲಿ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆಯನ್ನು ರಾಜಕೀಯಕ್ಕೆ ಮಾಡಿದ್ದಾರೋ, ಬೇರೆ ವೈಯಕ್ತಿಕ ವಿಚಾರಕ್ಕೆ ಮಾಡಿದ್ದಾರೋ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸತ್ಯಾಂಶ ಎಲ್ಲವೋ ಹೊರಗೆ ಬರಬೇಕು. ಜನರಿಗೂ ಗೊತ್ತಾಗಬೇಕು. ಯಾವ ತನಿಖೆ ಬೇಕಾದರೂ ಮಾಡಲಿ. ಒಟ್ಟಾರೆ ಪೊಲೀಸ್ ನವರು ವಿಫಲರಾಗಿದ್ದಾರೆ. ಕಾನೂನು ವ್ಯವಸ್ಥೆಯಲ್ಲಿ ಫೇಲ್ ಆಗಿದೆ. ಗೃಹ ಸಚಿವರು ಹೇಳಿದ್ದನ್ನು ಲೋಕಲ್ ಎಸ್‌ಪಿ ಹೇಳಲಿ. ಬಿಜೆಪಿಯವರಿಗೆ ರಾಜಕೀಯನೇ ಮುಖ್ಯವಾಗಿದೆ ಎಂಬುದಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...