Thursday, February 5, 2026
Thursday, February 5, 2026

ಬಿಜೆಪಿ ಸರ್ಕಾರ ಹಣ ಲೂಟಿ ಮಾಡುತ್ತಿದೆ ಜನಪರ ಕಾಳಜಿಯಿಲ್ಲ- ಕುಮಾರಸ್ವಾಮಿ

Date:

ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳುವ ಹೋರಾಟದಲ್ಲಿ ರಾಜಕಾರಣಿಗಳ ಮಕ್ಕಳು ಬಲಿಯಾಗುತ್ತಿಲ್ಲ. ಬದಲಿಗೆ ಅಮಾಯಕರ, ಬಡವರ ಮಕ್ಕಳು ಅಮಾನುಷವಾಗಿ ಬಲಿಯಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ಎಂಬ ಯುವಕನ ಹತ್ಯೆಯಾಗಿದ್ದು, ಆತನ ಅಗಲಿಕೆಯಿಂದ ಅವರ ಇಡೀ ಕುಟುಂಬ ಈಗ ಬೀದಿಗೆ ಬಂದಿದೆ ಎಂದು ಕುಮಾರಸ್ವಾಮಿ ನೋವಿನಿಂದ ನುಡಿದರು.

ಮೈಸೂರಿನ ಕೆ.ಆರ್.ನಗರದಲ್ಲಿ ಡಾ.ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ, ಮಾಜಿ ಮುಖ್ಯಮಂತ್ರಿಗಳು ಪರೋಕ್ಷವಾಗಿ ಬಿಜೆಪಿಯ ಸ್ವಾರ್ಥ ರಾಜಕಾರಣವನ್ನು ಕಟುವಾಗಿ ಟೀಕಿಸಿದರು.
ಬಿಜೆಪಿ ಸರಕಾರದ ಆಡಳಿತಲ್ಲಿ ಕಾರ್ಪೋರೇಟ್ ಕಂಪನಿಗಳು ಲಕ್ಷಾಂತರ ಕೋಟಿ ಕುಳಗಳಾಗುತ್ತಿವೆ. ಒಬ್ಬ ಕಾರ್ಪೋರೇಟ್ ವ್ಯಕ್ತಿಯ ಒಂದು ದಿನದ ಆದಾಯ 1 ಸಾವಿರದ 348 ಕೋಟಿ ರೂಪಾಯಿಗಳಾಗಿದೆ ಎಂದರು.

ಬಿಜೆಪಿ ಸರಕಾರ ಧನಿಕರ ಪರ ನೀತಿಯನ್ನು ಹೊಂದಿದೆ. ಆದರೆ ದೇಶದಲ್ಲಿ ಕೋಟ್ಯಂತರ ಜನರು ಸ್ವಾತಂತ್ರ್ಯ ಬಂದು ೭೫ ವರ್ಷವಾದ ಹೊತ್ತಿನಲ್ಲೂ ತುತ್ತು ಅನ್ನಕ್ಕೂ ಸಂಕಷ್ಟಪಡುತ್ತಿದ್ದಾರೆ ಎಂದು ಹೆಚ್ಡಿಕೆ ಮರುಗಿದರು.
ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ನಡೆಸುತ್ತಿರುವ ಸ್ವಾರ್ಥ ರಾಜಕೀಯವನ್ನು ಮಾಜಿ ಮುಖ್ಯಮಂತ್ರಿಗಳು ಎಳೆ ಎಳೆಯಾಗಿ ಬಿಡಿಸಿಟ್ಟರಲ್ಲದೆ; ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳಲು ಬಗೆಬಗೆಯ ಹೋರಾಟಗಳನ್ನು ರೂಪಿಸುತ್ತಾರೆ. ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿ ಕಟ್ಟುತ್ತಾರೆ. ಜಾತಿ ಧರ್ಮಗಳ ನಡುವೆ ಸಂಘರ್ಷ ತರುತ್ತಾರೆ. ಆದರೆ ಈ ಹೋರಾಟದಲ್ಲಿ ರಾಜಕಾರಣಿಗಳ ಮಕ್ಕಳು, ಉಳ್ಳವರ ಮಕ್ಕಳು ಬಲಿಯಾಗುತ್ತಿಲ್ಲ. ಬದಲಿಗೆ ಅಮಾಯಕರ ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

ಬಿಜೆಪಿ ಸರಕಾರ ಪ್ರತಿ ವಿಚಾರದಲ್ಲಿ ಹಣ ಲೂಟಿ ಮಾಡುವುದನ್ನೇ ನೋಡುತ್ತಿದೆಯೇ ಹೊರತು, ಜನ ಪರ ಕಾಳಜಿ ನೋಡುತ್ತಿಲ್ಲ ಎಂದು ಇದೇ ವೇಳೆ ಕುಮಾರಸ್ವಾಮಿ ಅವರು ಆರೋಪಿಸಿದರು.
ಕೆ.ಆರ್.ನಗರ ಪಟ್ಟಣದ ಹಾಸನ-ಮೈಸೂರು ಮುಖ್ಯರಸ್ತೆಯ ತೋಪಮ್ಮ ದೇವಸ್ಥಾನದ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿದರು.

ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...