Thursday, December 19, 2024
Thursday, December 19, 2024

ಭಾರತೀಯ ರೈಲ್ವೆಯು ಮಹಿಳೆಯರಿಗಾಗಿ ಕೆಲವು ಆಸನಗಳನ್ನ ಮೀಸಲಿಡಲಿದೆ

Date:

ಭಾರತೀಯ ರೈಲ್ವೆಯಲ್ಲಿ ಮಹಿಳಾ ಪ್ರಯಾಣಿಕರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು ಇನ್ನು ಮುಂದೆ ಮಹಿಳೆಯರಿಗೆ ರೈಲಿನಲ್ಲಿ ಕನ್ಫರ್ಮ್ ಸೀಟ್ ಸಿಗಲಿದೆ ಎಂದು ರೈಲ್ವೇ ಸಚಿವರು ಘೋಷಿಸಿದ್ದಾರೆ.

ರೈಲುಗಳಲ್ಲಿ ಮಹಿಳೆಯರ ಆರಾಮದಾಯಕ ಪ್ರಯಾಣಕ್ಕಾಗಿ ಭಾರತೀಯ ರೈಲ್ವೇ ಹಲವು ಸೌಲಭ್ಯಗಳನ್ನು ಆರಂಭಿಸಿದೆ.
ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಯ ನೂತನ ಕ್ರಮ ಕೈಗೊಂಡಿದೆ.

ಈಗ ಮಹಿಳೆಯರು ರೈಲಿನಲ್ಲಿ ಸೀಟಿಗಾಗಿ ಚಿಂತಿಸಬೇಕಾಗಿಲ್ಲ. ಮಹಿಳೆಯರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಬಸ್‌ಗಳು ಮತ್ತು ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಸೀಟುಗಳನ್ನು ಮೀಸಲಿಡುವಂತೆಯೇ ಈಗ ಭಾರತೀಯ ರೈಲ್ವೇ ಕೂಡ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಲಿದೆ ಎಂದು ರೈಲ್ವೆ ಸಚಿವರು ಘೋಷಿಸಿದ್ದಾರೆ. 

ಭಾರತೀಯ ರೈಲ್ವೇಯು ಈಗ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಬರ್ತ್‌ಗಳನ್ನು ವ್ಯವಸ್ಥೆ ಮಾಡಲಿದೆ. ದೂರದ ರೈಲುಗಳಲ್ಲಿ ಮಹಿಳೆಯರ ಆರಾಮದಾಯಕ ಪ್ರಯಾಣಕ್ಕಾಗಿ ಭಾರತೀಯ ರೈಲ್ವೇ ರಿಸರ್ವ್ ಬರ್ತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಆರಂಭಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. 

ಮುಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೂರದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಸ್ಲೀಪರ್ ಕ್ಲಾಸ್‌ನಲ್ಲಿ ಆರು ಬರ್ತ್‌ಗಳನ್ನು ಕಾಯ್ದಿರಿಸಲಾಗುವುದು. ಗರೀಬ್ ರಥ, ರಾಜಧಾನಿ, ಡುರೊಂಟೊ ಸೇರಿದಂತೆ ಸಂಪೂರ್ಣ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ ಮೂರನೇ ಎಸಿ ಕೋಚ್‌ನಲ್ಲಿ (3ಎಸಿ ವರ್ಗ) ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

ಪ್ರತಿ ಸ್ಲೀಪರ್ ಕೋಚ್‌ನಲ್ಲಿ ಆರರಿಂದ ಏಳು ಲೋವರ್ ಬರ್ತ್‌ಗಳು, ಹವಾನಿಯಂತ್ರಿತ 3 ಟೈಯರ್ (3 ಎಸಿ) ಕೋಚ್‌ಗಳಲ್ಲಿ ನಾಲ್ಕರಿಂದ ಐದು ಲೋವರ್ ಬರ್ತ್‌ಗಳು ಹಿರಿಯ ನಾಗರಿಕರಿಗೆ, 45 ವರ್ಷ ಮತ್ತು ಮೇಲ್ಪಟ್ಟ ಮಹಿಳಾ ಪ್ರಯಾಣಿಕರಿಗೆ ಮತ್ತು ಗರ್ಭಿಣಿಯರಿಗೆ ಮೀಸಲಿಡಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ.

ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ. ಇದರೊಂದಿಗೆ ರೈಲುಗಳು ಮತ್ತು ನಿಲ್ದಾಣಗಳಲ್ಲಿ ಮಹಿಳಾ ಪ್ರಯಾಣಿಕರು ಹಾಗೂ ಇತರ ಪ್ರಯಾಣಿಕರ ಸುರಕ್ಷತೆಗಾಗಿ ಜಿಆರ್‌ಪಿ ಸಹಾಯದಿಂದ ರೈಲ್ವೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashvani Bhadravati ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿತಾಣಗಳ ಚಿತ್ರ ಪ್ರದರ್ಶನ. ಪ್ರವಾಸೋದ್ಯಮಕ್ಕೆ ಬೆಂಬಲ- ಎನ್.ಹೇಮಂತ್

Akashvani Bhadravati ಆಕಾಶವಾಣಿ ಭದ್ರಾವತಿ 60ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ...

Klive Special Article ಕನ್ನಡ – ಒಂದಷ್ಟು ಆತಂಕಗಳು

Klive Special Article ಮತ್ತೊಮ್ಮೆ ಕನ್ನಡದ ನುಡಿ ಜಾತ್ರೆ ಬಂದಿದೆ ....

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತದೆ- ಸಂಸದ ರಾಘವೇಂದ್ರ

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸದ್ಯಕ್ಕೆ ಬಿ...