Friday, March 20, 2026
Friday, March 20, 2026

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ಹೆಮ್ಮೆಯ ಸಾಧನೆ

Date:

ಕಾರ್ಕಳ ಕ್ರಿಯೇಟಿವ್‌ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ.

ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ. ಪಿ.ರಾಜ್ಯಕ್ಕೆ 42 ನೇ ರ‍್ಯಾಂಕ್‌ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್‌ ಗಳಿಸಿರುತ್ತಾರೆ. ಮಧುಶ್ರೀ ವಿ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 72 ನೇ ರ‍್ಯಾಂಕ್‌, ಪಶುವೃದ್ಯಕೀಯ ಪ್ರಾಯೋಗಿಕದಲ್ಲಿ 126 ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಕಾಲೇಜಿನ ರಾಘವೇಂದ್ರ ತಾಳಿಕೋಟಿ ಪಶುವೈದ್ಯಕೀಯದಲ್ಲಿ ರಾಜ್ಯಕ್ಕೆ 110 ನೇ ರ‍್ಯಾಂಕ್‌, ಬಿ-ಫಾರ್ಮಾ ದಲ್ಲಿ 150 ನೇ ರ‍್ಯಾಂಕ್‌ , ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 165 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 186 ನೇ ರ‍್ಯಾಂಕ್‌ ಹಾಗೂ ಇಂಜಿನಿಯರಿಂಗ್ ನಲ್ಲಿ 636 ನೇ ರ‍್ಯಾಂಕ್‌ ಪಡೆದಿರುತ್ತಾರೆ. ಸಾತ್ವಿಕ್‌ ಶ್ರೀಕಾಂತ ಹೆಗಡೆ ಬಿ.ಎನ್‌.ವೈ.ಎಸ್‌ ನಲ್ಲಿ 116 ರ‍್ಯಾಂಕ್‌, ಪಶುವೈದ್ಯಕೀಯದಲ್ಲಿ 222 ನೇ ರ‍್ಯಾಂಕ್‌, ಬಿ.ಫಾರ್ಮಾ ದಲ್ಲಿ 383 ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಕುಮಾರಿ ಸಿಂಚನ ಕೆ ಎಸ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 745 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 835 ನೇ ರ‍್ಯಾಂಕ್‌, ಅಗಸ್ತ್ಯ ಸಮ್ಯಕ್‌ ಜ್ಞಾನ್‌ ಕೃಷಿ ವಿಜ್ಞಾನದಲ್ಲಿ 679 ನೇ ರ‍್ಯಾಂಕ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 924 ನೇ ರ‍್ಯಾಂಕ್‌ ಹಾಗೂ ಅನ್ವಿನ್ ಬಿ. ಪಿ. ಇಂಜಿನಿಯರಿಂಗ್‌ ವಿಭಾಗದಲ್ಲಿ 681 ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ರಾಜ್ಯ ಮಟ್ಟದ 1 ರಿಂದ 1000 ರ‍್ಯಾಂಕ್‌ ನ ಒಳಗೆ 31 ವಿದ್ಯಾರ್ಥಿಗಳು, 2000 ದ ಒಳಗೆ 66 ವಿದ್ಯಾರ್ಥಿಗಳು ರ‍್ಯಾಂಕ್‌ ನ್ನು ಗಳಿಸಿರುತ್ತಾರೆ. ತನ್ನ ಪ್ರಥಮ ವರ್ಷದ ಸಿ.ಇ.ಟಿ ಫಲಿತಾಂಶದಲ್ಲಿಯೇ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಈ ಅಮೋಘ ಸಾಧನೆ ದಾಖಲಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲೂ 100 ಶೇಕಡಾ ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಿ.ಇ.ಟಿ ಸಂಯೋಜಕರಾದ ಶ್ರೀ ಸುಜಯ್‌ ಬಿ ಟಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...