Wednesday, December 17, 2025
Wednesday, December 17, 2025

ಅಕ್ಷರ ಕಲಿಕೆ ಚಿತ್ರರೂಪದಲ್ಲಿದ್ದರೆ ಮಕ್ಕಳಿಗೆ ಸುಲಭ- ಮಂಜುನಾಥ್

Date:

ಅಕ್ಷರಗಳು ಭಾಷೆಯ ದೃಶ್ಯ ರೂಪ ಗಳಾಗಿದೆ. ಅಕ್ಷರಗಳ ಬರವಣಿಗೆಯನ್ನು ಪುಟ್ಟ ಮಕ್ಕಳಿಗೆ ಹೇಳಿಕೊಡುವಾಗ ಚಿತ್ರ ರೂಪದಲ್ಲಿ ಹೇಳಿ ಕೊಟ್ಟಲ್ಲಿ ಮಕ್ಕಳಿಗೆ ಕಷ್ಟವಾಗದೇ ಇಷ್ಟವಾಗುತ್ತದೆ ಎಂದು ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ ಅವರು ಅಭಿಪ್ರಾಯಪಟ್ಟಿದ್ದಾರೆ.

ದಾವಣಗೆರೆ ಸಮೀಪದ ಅವರಗೆರೆಯ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತ, ಪುಟ್ಟ ಮಕ್ಕಳಿಗೆ ಯಾವುದೇ ಭಾಷೆಯ ವರ್ಣಮಾಲೆ ಬರವಣಿಗೆ ಕಲಿಸಿಕೊಡುವಾಗ ಅಕ್ಷರಗಳನ್ನು ಆ ಅಕ್ಷರದ ರೂಪಕ್ಕೆ ಹೋಲಿಕೆಯಾಗುವ ಹಣ್ಣು ತರಕಾರಿ ಪ್ರಾಣಿ ಪಕ್ಷಿ ಅಥವಾ ಯಾವುದೇ ವಸ್ತುಗಳ ರೂಪಕ್ಕೆ ಹೋಲಿಸಿ ಬರೆದು ತೋರಿಸಿದಾಗ ಇಷ್ಟವಾಗುತ್ತದೆ. ಇದರಿಂದ ಅಕ್ಷರ ಅಭ್ಯಾಸದಲ್ಲಿ ಮಕ್ಕಳಿಗೆ ಆಸಕ್ತಿ ಹೆಚ್ಚುತ್ತದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮಿಗಳವರು ಅಕ್ಷರದಿಂದ ವಿದ್ಯೆ, ವಿದ್ಯೆಯಿಂದ ಜ್ಞಾನ,ಜ್ಞಾನದಿಂದ ಬದುಕಿನ ಸಾರ್ಥಕತೆ, ಆದ್ದರಿಂದ, ಅಕ್ಷರಾಭ್ಯಾಸವು ಪ್ರಮುಖ ಘಟ್ಟವಾಗಿದೆ ಎಂದು ಹೇಳಿದ್ದಾರೆ.

ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಎಂ. ಗುರುಸಿದ್ಧ ಸ್ವಾಮಿ ಮುಖ್ಯ ಅತಿಥಿಗಳಾಗಿ ಮಾತುಗಳನ್ನಾಡಿದರು.

ಸಂಸ್ಥೆಯ ಶಿವಮೂರ್ತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಛಾಯಾದೇವಿ, ಸಂಸ್ಥೆಯ ನಿರ್ದೇಶಕಿ ಸುಗಲಾ ದೇವಿ, ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದು. ಗುಣಶೀಲ ಪ್ರಾರ್ಥನೆ ಹಾಡಿದರೆ ಸಹಶಿಕ್ಷಕಿ ನೇತ್ರಾವತಿ ಸ್ವಾಗತ ಕೋರಿದರು. ಅನ್ನಪೂರ್ಣ ವಂದನೆ ಸಮರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...