Thursday, October 3, 2024
Thursday, October 3, 2024

ಸರ್ಕಾರಿ ನೌಕರರ ಮನೆಗಳ ಮೇಲೆ ತ್ರಿವರ್ಣ ರಂಜಿತ ಬಾವುಟ ಹಾರಿಸಲು ಸರ್ಕಾರದ ಸೂಚನೆ

Date:

ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.

ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ 3 ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.

ರಾಜ್ಯದಲ್ಲಿ ಒಂದು ಕೋಟಿ ಧ್ವಜಾರೋಹಣ ಮಾಡುವ ಗುರಿ ಹೊಂದಿದೆ. ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜನರು ಧ್ವಜವನ್ನು ಹಾರಿಸಬಹುದು, ಸೆಲ್ಫಿ ತೆಗೆದುಕೊಳ್ಳಬಹುದು. ಅದನ್ನು https://harghartirang.com ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...