Thursday, June 18, 2026
Thursday, June 18, 2026

ಸರ್ಕಾರಿ ನೌಕರರ ಮನೆಗಳ ಮೇಲೆ ತ್ರಿವರ್ಣ ರಂಜಿತ ಬಾವುಟ ಹಾರಿಸಲು ಸರ್ಕಾರದ ಸೂಚನೆ

Date:

ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.

ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ 3 ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.

ರಾಜ್ಯದಲ್ಲಿ ಒಂದು ಕೋಟಿ ಧ್ವಜಾರೋಹಣ ಮಾಡುವ ಗುರಿ ಹೊಂದಿದೆ. ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜನರು ಧ್ವಜವನ್ನು ಹಾರಿಸಬಹುದು, ಸೆಲ್ಫಿ ತೆಗೆದುಕೊಳ್ಳಬಹುದು. ಅದನ್ನು https://harghartirang.com ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...