Sunday, December 7, 2025
Sunday, December 7, 2025

ನಾನು ಯಾವತ್ತೂ ಜನ್ಮದಿನ ಆಚರಿಸಿಕೊಂಡವನಲ್ಲ- ಸಿದ್ಧರಾಮಯ್ಯ

Date:

ರಾಜ್ಯಾದ್ಯಂತ ದಾವಣಗೆರೆಯಲ್ಲಿ ಆ.3 ರಂದು ನಡೆಯಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಸಮಾವೇಶದ ಬಗ್ಗೆಯೇ ಚರ್ಚೆ ನಡೆದಿದೆ. ವರ್ಷದೊಳಗೆ ಎದುರಾಗಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪ್ರೀತಿಯಿಂದ ಕರೆಯುವ ಸಿದ್ದರಾಮೋತ್ಸವ ರಾಜಕೀಯ ವಲಯದಲ್ಲಿ ಮಹತ್ವ ಪಡೆದಿದೆ. ಈ ಸಮಾವೇಶಕ್ಕೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದ ಬೆಳವಣಿಗೆಗಳು, ಬಿಜೆಪಿ ಆಡಳಿತ, ಕಾಂಗ್ರೆಸ್ ಮುಂದಿರುವ ಸವಾಲುಗಳ ಬಗ್ಗೆ ಸಿದ್ದರಾಮಯ್ಯನವರು ಮುಕ್ತವಾಗಿ ಮಾತನಾಡಿದ್ದಾರೆ.

ನಾನು ಯಾವತ್ತೂ ಜನ್ಮದಿನ ಆಚರಿಸಿಕೊಂಡವನಲ್ಲ. ಏಕೆಂದರೆ ಅದು ನನ್ನ ನಿಜವಾದ ಹುಟ್ಟುಹಬ್ಬವಲ್ಲ. ಶಾಲೆಯಲ್ಲಿ ಮಾಸ್ಟರ್ ನಮೂದಿಸಿದ ದಿನಾಂಕ. ನನ್ನ ಕೆಲ ಸ್ನೇಹಿತರು ಹಾಗೂ ಹಿತೈಷಿಗಳು ಆ ದಿನಾಂಕದ ಪ್ರಕಾರ 75 ವರ್ಷ ಆಗುತ್ತದೆ, ರಾಜಕಾರಣಕ್ಕೆ ಬಂದು 45 ವರ್ಷ ಆಗುತ್ತದೆ ಎಂಬ ಕಾರಣಕ್ಕೆ ಆಚರಣೆ ಮಾಡುತ್ತಿದ್ದಾರೆಯೇ ಹೊರತು ಬೇರೆ ಯಾವ ಉದ್ದೇಶವೂ ಇಲ್ಲ. ಇದು ನನಗಾಗಿ ಮಾಡುತ್ತಿರುವ ಉತ್ಸವವೂ ಅಲ್ಲ. ಇಂದಿನ ರಾಜಕೀಯ ವ್ಯವಸ್ಥೆ, ದೇಶದ ಮುಂದಿರುವ ಸಮಸ್ಯೆ ಮೆಲಕು ಹಾಕಲು, ಪರಿಹಾರ ಕಂಡುಕೊಳ್ಳಲು, ಜನರನ್ನು ಎಚ್ಚರಿಸಲು ಚರ್ಚೆಗಳು ನಡೆಯುವ ಒಂದು ಕಾರ್ಯಕ್ರಮವಾಗಿರುತ್ತದೆ. ನಾನು ನಿಮಿತ್ತ ಮಾತ್ರ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...