Friday, May 22, 2026
Friday, May 22, 2026

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನ ಮಹತ್ವದ ಸಭೆ

Date:

ಮಹತ್ವದ ರಾಜ್ಯ ಕಾಂಗ್ರೆಸ್‌ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಹುಬ್ಬಳ್ಳಿಯಲ್ಲಿ ರಾಹುಲ್‌ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿತು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ , ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ರಾಮಲಿಂಗಾ ರೆಡ್ಡಿ, ಸತೀಶ್‌ ಜಾರಕಿಹೊಳಿ, ಈಶ್ವರ್‌ ಖಂಡ್ರೆ, ಧುೃವನಾರಾಯಣ ಪಾಲ್ಗೊಂಡಿದ್ದ ಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಎಲ್ಲರೂ ಒಗ್ಗೂಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ರಾಹುಲ್‌ ಗಾಂಧಿ ಕಿವಿಮಾತು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಮುಖ್ಯಮಂತ್ರಿ ವಿಚಾರ ಯಾರೂ ಮಾತನಾಡುವುದು ಬೇಡ. ಅದು ಬಿಜೆಪಿ ಹಾಗೂ ಜೆಡಿಎಸ್‌ಗೆ ನಾವೇ ಅಸ್ತ್ರ ಕೊಟ್ಟಂತೆ ಆಗುತ್ತದೆ. ಎಲ್ಲರೂ ಹೈಕಮಾಂಡ್‌ ವಹಿಸಿದ ಜವಾಬ್ದಾರಿ ನಿರ್ವಹಿಸಬೇಕು. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು ಎಂದು ತಾಕೀತು ಮಾಡಲಾಯಿತು ಎಂದು ಹೇಳಲಾಗಿದೆ.

ಸಭೆಯಲ್ಲಿ ಭಾಗವಹಿಸಿದ್ದವರು ಮುಂದಿನ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ತಮ್ಮದೇ ಆದ ಅಭಿಪ್ರಾಯ ಮತ್ತೆ ಸಲಹೆ ನೀಡಿದರು. ರಾಹುಲ್‌ ಗಾಂಧಿ ಎಲ್ಲರ ಅಭಿಪ್ರಾಯ ಸಹನೆಯಿಂದ ಅಲಿಸಿದರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...