Friday, February 6, 2026
Friday, February 6, 2026

ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆ ಪ್ರವೇಶಕ್ಕೆ ಕಠಿಣ ನಿಯಮ

Date:

ಈ ಬಾರಿಯ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೇ ಉಗ್ರ ಸಂಘಟನೆಗಳಿಂದ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರೀಯ ಗುಪ್ತಚರ ಇಲಾಖೆ (ಐಬಿ) ಎಚ್ಚರಿಸಿದೆ.

ರೋಹಿಂಗ್ಯಾ, ಅಫ್ಘಾನಿಸ್ತಾನ ಹಾಗೂ ಸುಡಾನ್ ದೇಶದ ಹೆಚ್ಚಿನ ಜನರು ವಾಸಿಸುವ ದೆಹಲಿಯಲ್ಲಿ ಹದ್ದಿನಕಣ್ಣು ಇಡುವಂತೆ ಹಾಗೂ ಟಿಫಿನ್ ಬಾಂಬ್, ಸ್ಟಿಕ್ಕಿ ಬಾಂಬ್ ಮತ್ತು ವಿವಿಐಡಿ ಬೆದರಿಕೆಯನ್ನು ಎದುರಿಸಲು ಜಾಗರೂಕರಾಗಿರುವಂತೆ ಹೇಳಿದೆ.

ಲಷ್ಷರ್, ಜೆಇಎಂ ಮತ್ತು ಇತರೆ ಕೆಲವು ಭಯೋತ್ಪಾದನಾ ಸಂಘಟನೆಗಳಿಂದ ದಾಳಿಯ ಅಪಾಯವಿರುವ ಬಗ್ಗೆ ಐಬಿ 10 ಪುಟಗಳ ವರದಿ ನೀಡಿದೆ.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಮೇಲಿನ ದಾಳಿ, ಉದಯಪುರ ಹತ್ಯೆ ಹಾಗೂ ಅಮರಾವತಿಗಳಲ್ಲಿ ನಡೆದ ಘಟನೆಗಳನ್ನೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಕೆಂಪುಕೋಟೆಗೆ ಪ್ರವೇಶಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಅದು ದೆಹಲಿ ಪೊಲೀಸರಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...