Sunday, March 29, 2026
Sunday, March 29, 2026

ಮುಖ್ಯ ರಸ್ತೆಗಳ ಸನಿಹ ಅನಧೀಕೃತ ಕಟ್ಟಡಗಳನ್ನ ನಿಷೇಧಿಸಿ ನಿಯಮ ಜಾರಿಗೆ

Date:

ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರುಗಳನ್ನು ಹೆದ್ದಾರಿ ಪ್ರಾಧಿಕಾರಿ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ದಾರಿಯಾಗಿರುತ್ತದೆ ಎಂದು ಸಿ.ಸಿ. ಪಾಟೀಲರು ವಿವರಿಸಿದ್ದಾರೆ.

ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ಎಂಬುದರ ಬಗ್ಗೆ ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯ ಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ.
ಸಿಟಿ ಕಾರ್ಪೋರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿ ಅಂಚಿನಿಂದ ಕನಿಷ್ಠ 6 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೋರೇಷನ್ ಪರಿಮಿತಿಯಿಂದ 15 ಕಿ.ಮೀ ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ.

ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ನೆರವಾಗುವುದಲ್ಲದೇ, ಸುಗಮ ಸಂಚಾರಕ್ಕೆ ಅವಕಾಶವಾಗಲಿದೆ. ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...