Thursday, July 9, 2026
Thursday, July 9, 2026

ಮುಖ್ಯ ರಸ್ತೆಗಳ ಸನಿಹ ಅನಧೀಕೃತ ಕಟ್ಟಡಗಳನ್ನ ನಿಷೇಧಿಸಿ ನಿಯಮ ಜಾರಿಗೆ

Date:

ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರುಗಳನ್ನು ಹೆದ್ದಾರಿ ಪ್ರಾಧಿಕಾರಿ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ದಾರಿಯಾಗಿರುತ್ತದೆ ಎಂದು ಸಿ.ಸಿ. ಪಾಟೀಲರು ವಿವರಿಸಿದ್ದಾರೆ.

ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ಎಂಬುದರ ಬಗ್ಗೆ ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯ ಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ.
ಸಿಟಿ ಕಾರ್ಪೋರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿ ಅಂಚಿನಿಂದ ಕನಿಷ್ಠ 6 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೋರೇಷನ್ ಪರಿಮಿತಿಯಿಂದ 15 ಕಿ.ಮೀ ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ.

ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ನೆರವಾಗುವುದಲ್ಲದೇ, ಸುಗಮ ಸಂಚಾರಕ್ಕೆ ಅವಕಾಶವಾಗಲಿದೆ. ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....