Tuesday, August 25, 2026
Tuesday, August 25, 2026

ಪಿಎಸ್ ಐ ಪ್ರಕರಣ ಶೀಘ್ರವೇ ಮರುಪರೀಕ್ಷೆ- ಆರಗ ಜ್ಞಾನೇಂದ್ರ

Date:

ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣದಿಂದ ರದ್ದು ಪಡಿಸಿರುವ ಪರೀಕ್ಷೆಯ ಮರುಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್‌ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ ಕುರಿತು ಭರವಸೆ ನೀಡಿದೆ. ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು.ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದೆ. ಯಾವುದೇ ಆತಂಕ ಬೇಡ ಎಂದು ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಸಚಿವರು ಕಿವಿಮಾತು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...