Tuesday, August 25, 2026
Tuesday, August 25, 2026

ರಾಜ್ಯದ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಪರಿಷ್ಕರಣೆ

Date:

ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ.

ಆಗಸ್ಟ್6ರಂದು ಶನಿವಾರ ಅತ್ಯಧಿಕ ಭಾರಿ ಮಳೆ ಆಗುವ ಕಾರಣಕ್ಕೆ ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 6ರಂದು ಕರ್ನಾಟಕ ಕರಾವಳಿಯ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20ಸೆಂ.ಮೀ.ಗಿತಂಲೂ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಇದೇ ಮೂರು ದಿನದ ಅವಧಿಯಲ್ಲಿ ಬೀದರ್, ಬೆಳಗಾವಿ, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಾಗ ಸಾಧಾರಣದಿಂದ ಭಾರಿ ಮಳೆ ಬೀಳುವ ಸಂಭವವಿದೆ.

ರಾಜ್ಯದಲ್ಲಿ ಆಗಸ್ಟ್ 07ರವರೆಗೆ ಅತೀ ಭಾರಿ ಮಳೆ ಮುಂದುವರಿಯಲಿದೆ. ಈ ಮೂರು ದಿನ ಕರವಳಿ ಜಿಲ್ಲೆಗಳೂ ಒಳಗೊಂಡಂತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಮಡಿಕೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ‘ಆರೆಂಜ್‌ ಅಲರ್ಟ್’ ಕೊಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...