Tuesday, August 25, 2026
Tuesday, August 25, 2026

ಪರಿಶಿಷ್ಟಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಪಡೆಯಲು ಅರ್ಜಿ ಆಹ್ವಾನ

Date:

2022 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ವೆಟರ್ನರಿ/ಅಗ್ರಿಕಲ್ಚರ್/ಮೆಡಿಕಲ್ ಕೋರ್ಸುಗಳಲ್ಲಿ ಎಲ್ಲಾ ಸೆಮಿಸ್ಟರ್ ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಎಸ್ ಎಸ್‍ಎಲ್‍ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ವಿದ್ಯಾಭ್ಯಾಸ ಮಾಡಿದ ಕೋರ್ಸಿಗೆ ಸಂಬಂಧಿಸಿದ ಎಲ್ಲಾ ಸೆಮಿಸ್ಟರ್ ಅಂಕಪಟ್ಟಿಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ರಾಷ್ಟ್ರೀಕೃತ ಬ್ಯಾಂಕಿನ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಈ ದಾಖಲೆಗಳ ಪ್ರತಿಗಳನ್ನು ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಣ ಮಾಡಿಸಿಕೊಂಡು, ಕಾಲೇಜು ಸಂಸ್ಥೆಗಳು ಯಾವ ತಾಲ್ಲೂಕಿಗೆ ಸಂಬಂಧಿಸಿರುತ್ತವೆಯೋ ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುದ್ದಾಂ ಭೇಟಿ ಮೂಲ ದಾಖಲೆಗಳ ಪರಿಶೀಲನೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ನ್ನು ಸಂಪರ್ಕಿಸುವುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ದಿ:31/10/2022 ರೊಳಗೆ ಅರ್ಜಿ ಸಲ್ಲಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...