Tuesday, March 31, 2026
Tuesday, March 31, 2026

ಇನ್ಫೋಸಿಸ್ ನಲ್ಲಿ ನೇಮಕಾತಿ ಅಧಿಸೂಚನೆ

Date:

ಬೆಂಗಳೂರು ಮೂಲದ ಐಟಿ ದಿಗ್ಗಜ ಇನ್ಫೋಸಿಸ್​ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಈ ನೇಮಕಾತಿ ಆರಂಭವಾಗಿದೆ. ಡಿಜಿಟಲ್ ಸೇವೆಗಳು ಮತ್ತು ಸಲಹಾ ಕ್ಷೇತ್ರದಲ್ಲಿ ನೇಮಕಾತಿಗೆ ಸಂಸ್ಥೆ ಮುಂದಾಗಿದ್ದು, ಫ್ರೇಶರ್​ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಿಎಸ್ಸಿ, ಬಿಇ ಮತ್ತು ಬಿಟೆಕ್​ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ಫೋಸಿಸ್​ನ ವ್ಯವಹಾರ ಪ್ರಕ್ರಿಯೆ ನಿರ್ವಹಣಾ ಅಂಗಸಂಸ್ಥೆಯನ್ನು ಬಿಪಿಎಂನಲ್ಲಿ ಈ ನೇಮಕಾತಿ ನಡೆಸಲಾಗುವುದು. ಸಂಸ್ಥೆಯಲ್ಲಿ ಕಸ್ಟಮರ್​ ಸರ್ವಿಸ್​ನಲ್ಲಿ ಕಾರ್ಯ ನಿರ್ವಹಿಸಲು ತಾಂತ್ರಿಕ ಪ್ರಕ್ರಿಯೆ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ: ಅಧಿಸೂಚನೆ ಅನುಸಾರ ಅಧಿಕೃತ ವಿಶ್ವವಿದ್ಯಾಲಯ ಮತ್ತು ಮಂಡಳಿಗಳಿಂದ ಅಭ್ಯರ್ಥಿಗಳು ಬಿಎಎಸ್ಸಿ, ಬಿಇ, ಮತ್ತು ಬಿಟೆಕ್​ ಪದವಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ

ಅನುಭವ: ಫ್ರೇಶರ್​ ಮತ್ತು ಒಂದು ವರ್ಷ ಸಂಬಂಧಿತ ಕ್ಷೇತ್ರದಲ್ಲಿ ಅನುಭವ

ವಯೋಮಿತಿ: ಇನ್ಫೋಸಿಸ್​ ನಿಯಮದ ಅನುಸಾರ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ

ಹುದ್ದೆಯ ಜವಾಬ್ದಾರಿ
ಕರೆಗಳು ಮತ್ತು ಇಮೇಲ್‌ಗಳ ಮೂಲಕ ಗ್ರಾಹಕರಿಗೆ ಸಹಾಯ ಮಾಡುವುದು ಪ್ರಧಾನ ಪಾತ್ರವಾಗಿದೆ.
ಗ್ರಾಹಕರ ಆಂತರಿಕ ವಿವಾದಗಳು, ಗ್ರಾಹಕರ ಕಾಳಜಿ ಮತ್ತು ಪರಿಹಾರವನ್ನು ಪಡೆಯಲು ಇಲಾಖೆಗಳ ನಡುವೆ ಕೆಲಸ ಮಾಡುವುದನ್ನು ಅನುಸರಿಸಿ.

ವ್ಯಾಪಾರ ಘಟಕಗಳ ಕರೆಯನ್ನು ನಿರ್ವಹಿಸುವಲ್ಲಿ ತೊಡಗಿಸಿಕೊಳ್ಳಬೇಕು
ಗ್ರಾಹಕರ ಪ್ರಶ್ನೆಗಳನ್ನು ಪರಿಹರಿಸುವುದು.

ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: www.infosys.com

ಅರ್ಜಿ ಸಲ್ಲಿಸುವ ವಿಧಾನ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

ಅರ್ಜಿ ಸಲ್ಲಿಸುವವರು ಈ ಲಿಂಕ್ ಕ್ಲಿಕ್​ ಮಾಡಬೇಕು. ಬಳಿಕ ಪಿಡಿಎಫ್/ಎಂಎಸ್ ವರ್ಡ್ ಫಾರ್ಮ್ಯಾಟ್ ಮೂಲಕ ರೆಸ್ಯೂಮೆ ಅಪ್ಲೋಡ್ ಮಾಡಬೇಕು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...