Saturday, December 6, 2025
Saturday, December 6, 2025

ಡಾ.ಪುನೀತ್ ಗೆ ರಾಜ್ಯೋತ್ಸವ‌ ದಿನ ಕರ್ನಾಟಕ ರತ್ನ ಪ್ರದಾನ- ಬೊಮ್ಮಾಯಿ

Date:

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕೃತ ಘೋಷಣೆ ಮಾಡಿದರು.

ಲಾಲ್‍ಬಾಗ್‍ನಲ್ಲಿ ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.

ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು.

ಫಲಪುಷ್ಪ ಪ್ರದರ್ಶನಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಆ.15ರವರೆಗೆ ನಡೆಯಲಿದ್ದು, ಲಕ್ಷಾಂತರ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದರು. ತೋಟಗಾರಿಕೆ ಇಲಾಖೆ ಸಚಿವರಾದ ಮುನಿರತ್ನ ಹಾಗೂ ಇತರ ಅಧಿಕಾರಿಗಳು ಬಹಳ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಿದರು.

ಇದಕ್ಕಾಗಿ ನಾನು ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಲಾಲ್‍ಬಾಗ್‍ನಲ್ಲಿ ಈ ಬಾರಿ ವಿಶೇಷವಾಗಿ ನಿರ್ಮಿಸಿರುವ ವರನಟ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಪುಷ್ಪಾಲಂಕೃತ ಪ್ರತಿಮೆಗಳಿಗೆ ಸಿಎಂ ಬೊಮ್ಮಾಯಿ, ಸಚಿವ ಮುನಿರತ್ನ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅಶ್ವಿನಿ ಪುನೀತ್‍ರಾಜ್‍ಕುಮಾರ್ ಸೇರಿದಂತೆ ಮತ್ತಿತರರು ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ಕೊಟ್ಟರು.

ಪ್ರಶಸ್ತಿಗಾಗಿ ಡಾ.ರಾಜ್‍ಕುಮಾರ್ ಕುಟುಂಬದ ಸದಸ್ಯರು ಹಾಗೂ ಸರ್ಕಾರದ ವತಿಯಿಂದ ಸಮಿತಿಯನ್ನು ರಚಿಸಲಾಗುವುದು. ಕಾರ್ಯಕ್ರಮ ಯಾವ ರೀತಿ ಇರಬೇಕು ಎಂಬುದು ಸೇರಿದಂತೆ ಅವರ ಸಹೋದರರ ಸಲಹೆ ಪಡೆದು ತೀರ್ಮಾನಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...