Thursday, February 5, 2026
Thursday, February 5, 2026

ಡಾ.ಪುನೀತ್ ಗೆ ರಾಜ್ಯೋತ್ಸವ‌ ದಿನ ಕರ್ನಾಟಕ ರತ್ನ ಪ್ರದಾನ- ಬೊಮ್ಮಾಯಿ

Date:

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕೃತ ಘೋಷಣೆ ಮಾಡಿದರು.

ಲಾಲ್‍ಬಾಗ್‍ನಲ್ಲಿ ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.

ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು.

ಫಲಪುಷ್ಪ ಪ್ರದರ್ಶನಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಆ.15ರವರೆಗೆ ನಡೆಯಲಿದ್ದು, ಲಕ್ಷಾಂತರ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದರು. ತೋಟಗಾರಿಕೆ ಇಲಾಖೆ ಸಚಿವರಾದ ಮುನಿರತ್ನ ಹಾಗೂ ಇತರ ಅಧಿಕಾರಿಗಳು ಬಹಳ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಿದರು.

ಇದಕ್ಕಾಗಿ ನಾನು ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಲಾಲ್‍ಬಾಗ್‍ನಲ್ಲಿ ಈ ಬಾರಿ ವಿಶೇಷವಾಗಿ ನಿರ್ಮಿಸಿರುವ ವರನಟ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಪುಷ್ಪಾಲಂಕೃತ ಪ್ರತಿಮೆಗಳಿಗೆ ಸಿಎಂ ಬೊಮ್ಮಾಯಿ, ಸಚಿವ ಮುನಿರತ್ನ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅಶ್ವಿನಿ ಪುನೀತ್‍ರಾಜ್‍ಕುಮಾರ್ ಸೇರಿದಂತೆ ಮತ್ತಿತರರು ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ಕೊಟ್ಟರು.

ಪ್ರಶಸ್ತಿಗಾಗಿ ಡಾ.ರಾಜ್‍ಕುಮಾರ್ ಕುಟುಂಬದ ಸದಸ್ಯರು ಹಾಗೂ ಸರ್ಕಾರದ ವತಿಯಿಂದ ಸಮಿತಿಯನ್ನು ರಚಿಸಲಾಗುವುದು. ಕಾರ್ಯಕ್ರಮ ಯಾವ ರೀತಿ ಇರಬೇಕು ಎಂಬುದು ಸೇರಿದಂತೆ ಅವರ ಸಹೋದರರ ಸಲಹೆ ಪಡೆದು ತೀರ್ಮಾನಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...