Monday, December 15, 2025
Monday, December 15, 2025

ರಾಜ್ಯದಲ್ಲಿ ಸ್ನಾತಕ ಪದವಿಕೋರ್ಸ್ ಗಳ ಅವಧಿ ಬದಲಿಲ್ಲ

Date:

ರಾಜ್ಯಾದ್ಯಂತ ಸ್ನಾತಕ ಪದವಿ ಕೋರ್ಸ್ ಗಳು ಹಿಂದಿನಂತೆ ಈಗಲೂ ಕೂಡ ಮೂರು ವರ್ಷಗಳ ಅವಧಿಯಾದಾಗಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದಾಗಿ ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ (ಎನ್ಇಪಿ) ಜಾರಿಗೊಂಡ ಬಳಿಕ ಬಿ.ಎ, ಬಿ.ಕಾಂ, ಬಿಎಸ್ಸಿ ಮತ್ತಿತರ ಸ್ನಾತಕ‌ ಪದವಿ ಕೋರ್ಸ್ ಗಳ ಅವಧಿ ನಾಲ್ಕು ವರ್ಷಗಳಿಗೆ ಹೆಚ್ಚಳವಾಗಿದೆ ಎಂದು ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮೂಡಿದೆ‌. ಆದರೆ, ಇದು ತಪ್ಪು ತಿಳುವಳಿಕೆಯಾಗಿದ್ದು, ಸ್ನಾತಕ ಪದವಿಗಳ ಅವಧಿ ಹಿಂದಿನಂತೆ ಈಗಲೂ ಕೂಡ ಮೂರು ವರ್ಷಗಳ ಅವಧಿಯಾಗಿರುತ್ತದೆ. ಪ್ರವೇಶಾತಿಯನ್ನು ದಂಡ ಶುಲ್ಕದೊಂದಿಗೆ ಆಗಸ್ಟ್ 20ರ ವರೆಗೆ ವಿಸ್ತರಿಸಲಾಗಿದ್ದು, ಯಾವುದೇ ಗೊಂದಲಕ್ಕೆ ಒಳಗಾಗದೆ ಪ್ರವೇಶ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ಚಿಕ್ಕಮಗಳೂರಿನ ಕಾಲೇಜುಗಳ ಪ್ರಾಂಶುಪಾಲರು ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ನಿರಾತಂಕವಾಗಿ ಪ್ರವೇಶ ಪಡೆದುಕೊಳ್ಳಬಹುದು. ಯಾವುದೇ ಗೊಂದಲವಿದ್ದಲ್ಲಿ‌ ಹೆಲ್ಪ್ ಡೆಸ್ಕ್ ಬಳಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನ್ವಯ ಪಿಯುಸಿ ನಂತರ ಸ್ನಾತಕ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಂದ ಮೊದಲ ವರ್ಷದ ಬಳಿಕ ಕಾಲೇಜು ತೊರೆದರೆ ಅಂತಹಾ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ನೀಡಲಾಗುವುದು. ಇನ್ನು ಎರಡು ವರ್ಷ ಪೂರೈಸಿ ಶಿಕ್ಷಣ ಮೊಟಕುಗೊಳಿಸಿದರೆ, ಯುಜಿ ಡಿಪ್ಲೊಮಾ ಸರ್ಟಿಫಿಕೇಟ್ ನೀಡಲಾಗುವುದು. ಮೂರನೆಯ ವರ್ಷ ಪೂರೈಸುವ ವಿದ್ಯಾರ್ಥಿಗಳು ಹಿಂದಿನಂತೆಯೇ ಪದವಿ ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. ನಾಲ್ಕನೇ ವರ್ಷ ಹಾನರ್ಸ್ ಕೋರ್ಸ್ ಆಗಿದ್ದು, ಇದು ಕಡ್ಡಾಯವಾಗಿರುವುದಿಲ್ಲ. ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿರುತ್ತದೆ.

ನಾಲ್ಕು ವರ್ಷ ಪೂರೈಸಿ ಹಾನರ್ಸ್ ಪದವಿ ಪಡೆಯುವ ವಿದ್ಯಾರ್ಥಿಗಳು ಒಂದು ವರ್ಷದ ಸ್ನಾತಕೋತ್ತರ ಪದವಿ ಕೋರ್ಸ್ ಗೆ ಪ್ರವೇಶ ಪಡೆದುಕೊಳ್ಳಬಹುದು ಅಥವಾ ನೇರವಾಗಿ ಪಿಎಚ್ ಡಿಗೆ ಅರ್ಜಿ ಸಲ್ಲಿಸಬಹುದು. ಮೂರು ವರ್ಷಗಳ ಪದವಿ ಪಡೆಯುವ ವಿದ್ಯಾರ್ಥಿಗಳು ಹಿಂದಿನಂತೆಯೇ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು ಅಥವಾ ಪದವಿ ಆಧಾರಿತ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರಥಮ, ದ್ವಿತೀಯ ವರ್ಷ ಪೂರೈಸಿ ಕಾಲೇಜು ಬಿಟ್ಟ ವಿದ್ಯಾರ್ಥಿಗಳು ಮುಂದೆ ತಮ್ಮ ಅನುಕೂಲದ ಅವಧಿಯಲ್ಲಿ‌ ಯಾವುದಾದರೂ ಕಾಲೆಜಿನಲ್ಲಿ ಮತ್ತೆ ಪ್ರವೇಶ ಪಡೆದು ಪದವಿ ಪೂರೈಸಲು ಅವಕಾಶವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...