Wednesday, April 29, 2026
Wednesday, April 29, 2026

ಚುನಾಯಿತ ಉಪರಾಷ್ಟ್ರಪತಿ ಧನ್ಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Date:

ನೂತನ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ರೈತನ ಮಗ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವುದು ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ 6 ಉಪರಾಷ್ಟ್ರಪತಿ ಚುನಾವಣೆಗಳಿಗೆ ಹೋಲಿಸಿದರೆ ಅತ್ಯಧಿಕ ಶೇ. 74ರಷ್ಟು ಮತಗಳನ್ನು ಪಡೆದು ವಿಜಯಶಾಲಿಯಾದ ಧನಕರ್ ಅವರನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಧನಕರ್ ಅವರಿಗೆ ಮತದಾನ ಮಾಡಿದ ಎಲ್ಲ ಸಂಸದರಿಗೂ ಮೋದಿ ಧನ್ಯವಾದ ಹೇಳಿದರು.

ನಾವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ, ಅದ್ಬುತ ಕಾನೂನು ಜ್ಞಾನ ಹಾಗೂ ಬುದ್ಧಿಜೀವಿಯಾಗಿರುವ ರೈತನ ಮಗನನ್ನು ದೇಶದ ಉಪ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪಕ್ಷದ ಅದ್ಭುತ ಬೆಂಬಲದೊಂದಿಗೆ ಭಾರತದ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧನಕರ್ ಜಿ ಅವರಿಗೆ ಅಭಿನಂದನೆಗಳು. ಅವರು ಅತ್ಯುತ್ತಮ ಉಪ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ. ಅವರ ಬುದ್ಧಿವಂತಿಕೆಯಿಂದ ನಮ್ಮ ರಾಷ್ಟ್ರವು ಮಹತ್ತರವಾದ ಲಾಭವನ್ನು ಪಡೆಯುತ್ತದೆ ಎಂದು ಅವರು ಹೇಳಿದ್ದಾರೆ.

ಧನಕರ್ ಅವರು 528 ಮತಗಳನ್ನು ಪಡೆದರೆ, ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರು 182 ಮತಗಳನ್ನು ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...

JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ...

Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ

Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು...